Latest

₹40,000 ಲಂಚ ಸ್ವೀಕರಿಸುವಾಗ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರು ಚಾಲಕ ಲೋಕಾಯುಕ್ತ ಬಲೆಗೆ!

ಚನ್ನಗಿರಿ: ಅಮಾನತುಗೊಂಡ ಗ್ರಂಥಾಲಯ ಮೇಲ್ವಿಚಾರಕರನ್ನು ಪುನರ್‌ನೇಮಕ ಮಾಡಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ್ ಅವರ ಕಾರು ಚಾಲಕ ಶ್ಯಾಮಕುಮಾರ್‌ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಲಂಚಕ್ಕಾಗಿ ಬೇಡಿಕೆ – ದೂರು

ಚನ್ನಗಿರಿ ತಾಲ್ಲೂಕಿನ ಬೆಳ್ಳಿಗನೂಡು ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕ ಶಫೀವುಲ್ಲಾ ಕರ್ತವ್ಯಲೋಪದ ಆರೋಪದ ಮೇರೆಗೆ ಫೆಬ್ರುವರಿಯಲ್ಲಿ ಅಮಾನತುಗೊಂಡಿದ್ದರು. ಈ ಹುದ್ದೆಗೆ ಪುನರ್‌ನೇಮಕ ಮಾಡಿಸಿಕೊಳ್ಳಲು ಶ್ಯಾಮಕುಮಾರ್‌ ₹50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಶಫೀವುಲ್ಲಾ ಮಾರ್ಚ್ 21ರಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಚಾಲಕ

ಲೋಕಾಯುಕ್ತ ಪೊಲೀಸರು ಸೋಮವಾರ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಜಾಲ ಬಿಗಿಯಿಸಿದ್ದರು. ಲಂಚದ ರೂಪದಲ್ಲಿ ₹40,000 ಪಡೆಯುವ ವೇಳೆ ಶ್ಯಾಮಕುಮಾರ್ ಅವರನ್ನು ಹಿಡಿದು ಬಂಧಿಸಿದರು.

ಆರೋಪಿ ದಿನಗೂಲಿ ಚಾಲಕ

ಬಂಧಿತ ಶ್ಯಾಮಕುಮಾರ್‌ ತಾಲ್ಲೂಕು ಪಂಚಾಯಿತಿಯಲ್ಲಿ ದಿನಗೂಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಂಚದ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ.

ಸ್ಥಳೀಯ ಅಧಿಕಾರಿಗಳ ಮೇಲೂ ಅನುಮಾನ

ಈ ಪ್ರಕರಣದಲ್ಲಿ ಮತ್ತೊಬ್ಬರು ಸೇರಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೂರೆ ತಿಳಿಸಿದ್ದಾರೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 hour ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 hour ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago