ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಒಳಗೊಂಡತೆಸಂಚಾರ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ನಗರ ಸಂಚಾರ ಪೊಲೀಸರು 312 ಆಟೊಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರು ನಗರದ 44 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ ಪೊಲೀಸರು, ಆಟೊ ಚಾಲಕರಿಗೆ ಬಿಸಿ ಮುಟ್ಟಿಸಿದರು.
ಪ್ರಯಾಣಿಕರಂತೆ ಮಫ್ತಿಯಲ್ಲಿ ಆಟೊ ಏರಿದ ಪೊಲೀಸರು, ದುಪ್ಪಟ್ಟು ದರ ವಸೂಲಿ ಮಾಡಿ ಸಾರ್ವಜನಿಕರನ್ನು ಶೋಷಿಸುತ್ತಿದ್ದ 312 ಚಾಲಕರ ಆಟೋಗಳನ್ನು ಜಪ್ತಿ ಮಾಡಿದರು.
ಅದೇ ರೀತಿ, ಪ್ರಯಾಣಿಕರು ಕರೆದ ಸ್ಥಳಕ್ಕೆ ಹೋಗಲು ನಿರಾಕರಿಸಿದ 270 ಚಾಲಕರ ವಾಹನಗಳನ್ನು ವಶಕ್ಕೆ ತೆಗೆದುಕೊಂಡರು. ಇತರೆ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 532 ಪ್ರಕರಣ ದಾಖಲಿಸಿದರು. ಒಟ್ಟಾರೆ 1,114 ಮಂದಿ ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ಪೊಲೀಸರು ದಂಡ ವಿಧಿಸಿದರು.
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…