ಭಟ್ಕಳ, ಆಗಸ್ಟ್ 1: ಶಿರಾಲಿಯ ಹುಲ್ಲಕ್ಕಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಜುಗಾರಿ ಆಟದ ಅಡ್ಡೆಯ ಮೇಲೆ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರಿಗೆ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಜುಗಾರಿಯಲ್ಲಿ ತೊಡಗಿದ್ದವರು ಅರಣ್ಯ ಪ್ರದೇಶದಲ್ಲಿ ಕೋಳಿ ಕಾಳಗವನ್ನು ಆಯೋಜಿಸಿಕೊಂಡು ಹಣಪೆಣ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ.
ದಾಳಿಯ ವೇಳೆ ಸ್ಥಳದಿಂದ ೩೩೦೫ ರೂಪಾಯಿ ನಗದು, ನಾಲ್ಕು ರಿಕ್ಷಾ, ಐದು ಬೈಕು ಹಾಗೂ ಮೂರು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವೆಲ್ಲವನ್ನೂ ಸೇರಿಸಿ, ಜಪ್ತಿ ಮಾಡಿದ ವಸ್ತುಗಳ ಮೌಲ್ಯ ಸುಮಾರು 18.83 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಕುರಿತಾಗಿ ಶಿರಾಲಿ ಹುಲ್ಲಕ್ಕಿ ಅರಣ್ಯದಲ್ಲಿ ಜುಗಾರಿ ಆಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ 15 ಮಂದಿ ವಿರುದ್ಧ ಐಪಿಸಿ ಮತ್ತು ಜುಗಾರಿ ನಿಷೇಧಕ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಇದೀಗ ಆರೋಪಿಗಳನ್ನು ತೀವ್ರ ವಿಚಾರಣೆಗಾಗಿ ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಪೊಲೀಸರು ಮುಂದಾಗಿರುವುದು ಗ್ರಾಮೀಣ ಪ್ರದೇಶಗಳಲ್ಲಿ ಶಿಸ್ತಿನ ಕಾರ್ಯಾಚರಣೆಗೆ ಉದಾಹರಣೆ ಎಂಬಂತಾಗಿದೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…