ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ, ಪವಿತ್ರ ಗಂಗೆಯಲ್ಲಿ ಸ್ನಾನ ಮಾಡುವ ಮೂಲಕ ಪುಣ್ಯ ಸಂಪಾದಿಸುತ್ತಿದ್ದಾರೆ. ಜಗತ್ತಿನ ಅತಿ ದೊಡ್ಡ ಧಾರ್ಮಿಕ ಮಹಾಸಂಭ್ರಮವೆನಿಸಿರುವ ಈ ಮೇಳದಲ್ಲಿ ದೇಶದಾದ್ಯಂತ ಹಾಗೂ ವಿದೇಶಗಳಿಂದಲೂ ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದಾರೆ.
ಆದರೆ, ಇಂತಹ ಪವಿತ್ರ ಮೇಳದ ಮೈದಾನದಲ್ಲಿ ನಡೆದ ಒಂದು ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಕುಂಭಮೇಳಕ್ಕೆ ಬಂದ ದಂಪತಿಯೊಬ್ಬರು ತಮ್ಮ ಟೆಂಟ್ನಲ್ಲಿ ಕೋಳಿ ಬೇಯಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾಧುಸಂತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರ ಹಸ್ತಕ್ಷೇಪದ ಬಳಿಕ, ಆ ದಂಪತಿಗಳು ತಕ್ಷಣವೇ ಸ್ಥಳವನ್ನು ಅಗಲಬೇಕಾಯಿತು.
ಮಾಂಸಾಹಾರ ನಿಷೇಧದ ಆದೇಶ
ಕುಂಭಮೇಳದ ಪೂರ್ವಭಾವಿಯಲ್ಲಿ ಉತ್ತರ ಪ್ರದೇಶ ಸರ್ಕಾರ ಮಹಾಮೇಳದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ, ಮೊಟ್ಟೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯ ಅಧಿಕಾರಿಗಳು ಈ ನಿಯಮದ ಅನುಷ್ಠಾನಕ್ಕಾಗಿ ವಿಶೇಷ ಕ್ರಮಗಳನ್ನೂ ಕೈಗೊಂಡಿದ್ದರು. ಇದನ್ನು ಪೂರಕವಾಗಿ, ಹಲವು ಹಿಂದೂ ಧಾರ್ಮಿಕ ಸಂಸ್ಥೆಗಳು ಕೂಡ ಮಾಂಸ ಮಾರಾಟ ನಿಷೇಧಕ್ಕೆ ಒತ್ತಾಯಿಸಿದ್ದವು.
ಭಕ್ತರಲ್ಲಿ ಆಕ್ರೋಶ
ಪವಿತ್ರ ಸ್ಥಳದಲ್ಲಿ ಕೋಳಿ ಅಡುಗೆ ಮಾಡಿರುವುದು ಭಕ್ತಾದಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ. ಅನೇಕರು ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದು, “ಧಾರ್ಮಿಕ ಸ್ಥಳಗಳ ನಿಯಮಗಳಿಗೆ ಗೌರವ ತೋರಬೇಕು” ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಘಟನೆಯಿಂದ ಕುಂಭಮೇಳದಲ್ಲಿ ಅಹಿಂಸಾ ಮತ್ತು ಶುದ್ಧತೆಯ ಮೌಲ್ಯಗಳನ್ನು ಉಳಿಸಬೇಕಾದ ಅವಶ್ಯಕತೆಯನ್ನು ಮತ್ತೊಮ್ಮೆ ಒತ್ತಿಹೇಳಲಾಗಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…