ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ, ಪವಿತ್ರ ಗಂಗೆಯಲ್ಲಿ ಸ್ನಾನ ಮಾಡುವ ಮೂಲಕ ಪುಣ್ಯ ಸಂಪಾದಿಸುತ್ತಿದ್ದಾರೆ. ಜಗತ್ತಿನ ಅತಿ ದೊಡ್ಡ ಧಾರ್ಮಿಕ ಮಹಾಸಂಭ್ರಮವೆನಿಸಿರುವ ಈ ಮೇಳದಲ್ಲಿ ದೇಶದಾದ್ಯಂತ ಹಾಗೂ ವಿದೇಶಗಳಿಂದಲೂ ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದಾರೆ.
ಆದರೆ, ಇಂತಹ ಪವಿತ್ರ ಮೇಳದ ಮೈದಾನದಲ್ಲಿ ನಡೆದ ಒಂದು ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಕುಂಭಮೇಳಕ್ಕೆ ಬಂದ ದಂಪತಿಯೊಬ್ಬರು ತಮ್ಮ ಟೆಂಟ್ನಲ್ಲಿ ಕೋಳಿ ಬೇಯಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾಧುಸಂತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರ ಹಸ್ತಕ್ಷೇಪದ ಬಳಿಕ, ಆ ದಂಪತಿಗಳು ತಕ್ಷಣವೇ ಸ್ಥಳವನ್ನು ಅಗಲಬೇಕಾಯಿತು.
ಮಾಂಸಾಹಾರ ನಿಷೇಧದ ಆದೇಶ
ಕುಂಭಮೇಳದ ಪೂರ್ವಭಾವಿಯಲ್ಲಿ ಉತ್ತರ ಪ್ರದೇಶ ಸರ್ಕಾರ ಮಹಾಮೇಳದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ, ಮೊಟ್ಟೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯ ಅಧಿಕಾರಿಗಳು ಈ ನಿಯಮದ ಅನುಷ್ಠಾನಕ್ಕಾಗಿ ವಿಶೇಷ ಕ್ರಮಗಳನ್ನೂ ಕೈಗೊಂಡಿದ್ದರು. ಇದನ್ನು ಪೂರಕವಾಗಿ, ಹಲವು ಹಿಂದೂ ಧಾರ್ಮಿಕ ಸಂಸ್ಥೆಗಳು ಕೂಡ ಮಾಂಸ ಮಾರಾಟ ನಿಷೇಧಕ್ಕೆ ಒತ್ತಾಯಿಸಿದ್ದವು.
ಭಕ್ತರಲ್ಲಿ ಆಕ್ರೋಶ
ಪವಿತ್ರ ಸ್ಥಳದಲ್ಲಿ ಕೋಳಿ ಅಡುಗೆ ಮಾಡಿರುವುದು ಭಕ್ತಾದಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ. ಅನೇಕರು ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದು, “ಧಾರ್ಮಿಕ ಸ್ಥಳಗಳ ನಿಯಮಗಳಿಗೆ ಗೌರವ ತೋರಬೇಕು” ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಘಟನೆಯಿಂದ ಕುಂಭಮೇಳದಲ್ಲಿ ಅಹಿಂಸಾ ಮತ್ತು ಶುದ್ಧತೆಯ ಮೌಲ್ಯಗಳನ್ನು ಉಳಿಸಬೇಕಾದ ಅವಶ್ಯಕತೆಯನ್ನು ಮತ್ತೊಮ್ಮೆ ಒತ್ತಿಹೇಳಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…