ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ, ಪವಿತ್ರ ಗಂಗೆಯಲ್ಲಿ ಸ್ನಾನ ಮಾಡುವ ಮೂಲಕ ಪುಣ್ಯ ಸಂಪಾದಿಸುತ್ತಿದ್ದಾರೆ. ಜಗತ್ತಿನ ಅತಿ ದೊಡ್ಡ ಧಾರ್ಮಿಕ ಮಹಾಸಂಭ್ರಮವೆನಿಸಿರುವ ಈ ಮೇಳದಲ್ಲಿ ದೇಶದಾದ್ಯಂತ ಹಾಗೂ ವಿದೇಶಗಳಿಂದಲೂ ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದಾರೆ.
ಆದರೆ, ಇಂತಹ ಪವಿತ್ರ ಮೇಳದ ಮೈದಾನದಲ್ಲಿ ನಡೆದ ಒಂದು ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಕುಂಭಮೇಳಕ್ಕೆ ಬಂದ ದಂಪತಿಯೊಬ್ಬರು ತಮ್ಮ ಟೆಂಟ್ನಲ್ಲಿ ಕೋಳಿ ಬೇಯಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾಧುಸಂತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರ ಹಸ್ತಕ್ಷೇಪದ ಬಳಿಕ, ಆ ದಂಪತಿಗಳು ತಕ್ಷಣವೇ ಸ್ಥಳವನ್ನು ಅಗಲಬೇಕಾಯಿತು.
ಮಾಂಸಾಹಾರ ನಿಷೇಧದ ಆದೇಶ
ಕುಂಭಮೇಳದ ಪೂರ್ವಭಾವಿಯಲ್ಲಿ ಉತ್ತರ ಪ್ರದೇಶ ಸರ್ಕಾರ ಮಹಾಮೇಳದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ, ಮೊಟ್ಟೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯ ಅಧಿಕಾರಿಗಳು ಈ ನಿಯಮದ ಅನುಷ್ಠಾನಕ್ಕಾಗಿ ವಿಶೇಷ ಕ್ರಮಗಳನ್ನೂ ಕೈಗೊಂಡಿದ್ದರು. ಇದನ್ನು ಪೂರಕವಾಗಿ, ಹಲವು ಹಿಂದೂ ಧಾರ್ಮಿಕ ಸಂಸ್ಥೆಗಳು ಕೂಡ ಮಾಂಸ ಮಾರಾಟ ನಿಷೇಧಕ್ಕೆ ಒತ್ತಾಯಿಸಿದ್ದವು.
ಭಕ್ತರಲ್ಲಿ ಆಕ್ರೋಶ
ಪವಿತ್ರ ಸ್ಥಳದಲ್ಲಿ ಕೋಳಿ ಅಡುಗೆ ಮಾಡಿರುವುದು ಭಕ್ತಾದಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ. ಅನೇಕರು ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದು, “ಧಾರ್ಮಿಕ ಸ್ಥಳಗಳ ನಿಯಮಗಳಿಗೆ ಗೌರವ ತೋರಬೇಕು” ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಘಟನೆಯಿಂದ ಕುಂಭಮೇಳದಲ್ಲಿ ಅಹಿಂಸಾ ಮತ್ತು ಶುದ್ಧತೆಯ ಮೌಲ್ಯಗಳನ್ನು ಉಳಿಸಬೇಕಾದ ಅವಶ್ಯಕತೆಯನ್ನು ಮತ್ತೊಮ್ಮೆ ಒತ್ತಿಹೇಳಲಾಗಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…