Categories: Latest

ರಸ್ತೆಯಲ್ಲಿ ಕೋಳಿಗಳ ಜಾಕ್‌ಪಾಟ್! ಲಾರಿ ಪಲ್ಟಿ ಆಗುತ್ತಿದ್ದಂತೆ ಮುಗಿಬಿದ್ದ ಜನರು.

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕೋಳಿ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ನೂರಾರು ಕೋಳಿಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅವುಗಳನ್ನು ಹಿಡಿದುಕೊಳ್ಳಲು ಮುಗಿಬಿದ್ದ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ.

ಲಾರಿ ಪಲ್ಟಿಯಾದ ಕ್ಷಣ

ಮಾಹಿತಿಯ ಪ್ರಕಾರ, ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿ ಅಚಾನಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ್ದರಿಂದ, ಲಾರಿಯಲ್ಲಿದ್ದ ಕೋಳಿಗಳು ರಸ್ತೆಯ ಮೇಲೆ ಹರಡಿದವು. ಈ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ಹಾದುಹೋಗುತ್ತಿದ್ದ ಪ್ರಯಾಣಿಕರು ಲಾರಿ ಸಮೀಪಕ್ಕೆ ದೌಡಾಯಿಸಿ, ಕೈಗೆ ಸಿಕ್ಕಷ್ಟು ಕೋಳಿಗಳನ್ನು ಹಿಡಿದುಕೊಳ್ಳಲು ಹರಸಾಹಸ ಪಟ್ಟರು.

ಜನರ ಹಾವಳಿ, ವೈರಲ್ ಆಗಿದ ದೃಶ್ಯ

ಘಟನೆಯ ಸುದ್ದಿಯೊಡನೆ ಪಕ್ಕದ ಹಳ್ಳಿಯವರೂ ಸ್ಥಳಕ್ಕೆ ಆಗಮಿಸಿ ಕೋಳಿಗಳನ್ನು ಹಿಡಿಯಲು ಮುಗಿಬಿದ್ದರು. ಈ ಗದ್ದಲದ ಮಧ್ಯೆ ಕೆಲವರು ಕೈಗೆ ಸಿಕ್ಕಷ್ಟು ಕೋಳಿಗಳನ್ನು ಕೈಯಲ್ಲಿ ಹಿಡಿದುಕೊಂಡು ಓಡಲು ಪ್ರಾರಂಭಿಸಿದರು. ಕೆಲವರು ಬೈಕ್ ಹಾಗೂ ಸೈಕಲ್ ಬಳಸಿ ಕೋಳಿಗಳನ್ನು ಸಾಗಿಸಿಕೊಳ್ಳುತ್ತಿದ್ದರೆ, ಇತರ ಕೆಲವರು ಬಟ್ಟೆ ಹಾಗೂ ಚೀಲಗಳಲ್ಲಿ ತುಂಬಿಕೊಂಡು ಹೋಗುವ ದೃಶ್ಯವೂ ಕಂಡುಬಂದಿದೆ.

ಸದ್ಯ, ಈ ಘಟನೆಯ ವಿಡಿಯೋ  ಹರಿದಾಡುತ್ತಿದ್ದು, ನೆಟ್ಟಿಗರು ಇದರ ಬಗ್ಗೆ ತೀವ್ರ ಚರ್ಚೆ ನಡೆಸುತ್ತಿದ್ದಾರೆ. ಲಾರಿಯ ಚಾಲಕನ ಸ್ಥಿತಿ ಹಾಗೂ ಅಪಘಾತದ ಪೈಚಾರಿ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago