Categories: Latest

ರಸ್ತೆಯಲ್ಲಿ ಕೋಳಿಗಳ ಜಾಕ್‌ಪಾಟ್! ಲಾರಿ ಪಲ್ಟಿ ಆಗುತ್ತಿದ್ದಂತೆ ಮುಗಿಬಿದ್ದ ಜನರು.

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕೋಳಿ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ನೂರಾರು ಕೋಳಿಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅವುಗಳನ್ನು ಹಿಡಿದುಕೊಳ್ಳಲು ಮುಗಿಬಿದ್ದ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ.

ಲಾರಿ ಪಲ್ಟಿಯಾದ ಕ್ಷಣ

ಮಾಹಿತಿಯ ಪ್ರಕಾರ, ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿ ಅಚಾನಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ್ದರಿಂದ, ಲಾರಿಯಲ್ಲಿದ್ದ ಕೋಳಿಗಳು ರಸ್ತೆಯ ಮೇಲೆ ಹರಡಿದವು. ಈ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ಹಾದುಹೋಗುತ್ತಿದ್ದ ಪ್ರಯಾಣಿಕರು ಲಾರಿ ಸಮೀಪಕ್ಕೆ ದೌಡಾಯಿಸಿ, ಕೈಗೆ ಸಿಕ್ಕಷ್ಟು ಕೋಳಿಗಳನ್ನು ಹಿಡಿದುಕೊಳ್ಳಲು ಹರಸಾಹಸ ಪಟ್ಟರು.

ಜನರ ಹಾವಳಿ, ವೈರಲ್ ಆಗಿದ ದೃಶ್ಯ

ಘಟನೆಯ ಸುದ್ದಿಯೊಡನೆ ಪಕ್ಕದ ಹಳ್ಳಿಯವರೂ ಸ್ಥಳಕ್ಕೆ ಆಗಮಿಸಿ ಕೋಳಿಗಳನ್ನು ಹಿಡಿಯಲು ಮುಗಿಬಿದ್ದರು. ಈ ಗದ್ದಲದ ಮಧ್ಯೆ ಕೆಲವರು ಕೈಗೆ ಸಿಕ್ಕಷ್ಟು ಕೋಳಿಗಳನ್ನು ಕೈಯಲ್ಲಿ ಹಿಡಿದುಕೊಂಡು ಓಡಲು ಪ್ರಾರಂಭಿಸಿದರು. ಕೆಲವರು ಬೈಕ್ ಹಾಗೂ ಸೈಕಲ್ ಬಳಸಿ ಕೋಳಿಗಳನ್ನು ಸಾಗಿಸಿಕೊಳ್ಳುತ್ತಿದ್ದರೆ, ಇತರ ಕೆಲವರು ಬಟ್ಟೆ ಹಾಗೂ ಚೀಲಗಳಲ್ಲಿ ತುಂಬಿಕೊಂಡು ಹೋಗುವ ದೃಶ್ಯವೂ ಕಂಡುಬಂದಿದೆ.

ಸದ್ಯ, ಈ ಘಟನೆಯ ವಿಡಿಯೋ  ಹರಿದಾಡುತ್ತಿದ್ದು, ನೆಟ್ಟಿಗರು ಇದರ ಬಗ್ಗೆ ತೀವ್ರ ಚರ್ಚೆ ನಡೆಸುತ್ತಿದ್ದಾರೆ. ಲಾರಿಯ ಚಾಲಕನ ಸ್ಥಿತಿ ಹಾಗೂ ಅಪಘಾತದ ಪೈಚಾರಿ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

21 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

21 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

21 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago