Latest

ಕಣ್ಣೀರು ಹಾಕಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ತಮ್ಮ ಹಳೆ ಸ್ನೇಹಿತರು ಸಂಬಂಧಿಕರನ್ನು ನೋಡಿ ಭಾವುಕಾರದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ಕಣ್ಣೀರು ಹಾಕಿದರು. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿರುವ ತಮ್ಮ ತಂದೆ ತಾಯಿ ಜನಿಸಿದ ಬಾಳಿ ಬದುಕಿದ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಆ ಸಂದರ್ಭ ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿ ಕಣ್ಣೀರಿಟ್ಟರು.
ಇದೇ ಸಂದರ್ಭ ಅವರು ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯವನ್ನು ಸಿಎಂ ಬೊಮ್ಮಾಯಿ ನೆನೆದರು. ಇದೇ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದು ‘ನಮ್ಮ ಪೂರ್ವಜರು ಬದುಕಿ ಬಾಳಿದಂತಹ ಮನೆ. ನಮ್ಮ ತಂದೆ ಇದ್ದಂತಹ ಮನೆ, ಎಲ್ಲ ಹಿರಿಯರು, ಸ್ನೇಹಿತರು ನೆನಪಾಗ್ತಾರೆ. ಚಿಕ್ಕಂದಿನಲ್ಲಿ ಸ್ನೇಹಿತರು ಜತೆಗೆ ಕಳೆದ ಆಟಗಳು ಕ್ಷಣಗಳ ಎಲ್ಲವೂ ನೆನಪು ಆಗುತ್ತೆ.
ಬಹಳ ಸುಂದರ ಗ್ರಾಮ ನನ್ನದು ಒಳ್ಳೆಯ ಕೆರೆ,ದೇವಸ್ಥಾನಗಳಿವೆ. 52 ದಶಕಗಳ ಹಿಂದೆಯೇ ಒಳ್ಳೆಯದು ಲೈಬ್ರರಿ ಇರೋ ಗ್ರಾಮ ನಮ್ಮದು. ನಮ್ಮ ಗ್ರಾಮದಲ್ಲಿ ಫಲವತ್ತಾದ ಜಮೀನು‌ ಇದೆ. ಕಷ್ಟಪಟ್ಟು ದುಡಿಯುವ ಜನ ಬಹಳ ಸಜ್ಜನರು. ಗ್ರಾಮದಲ್ಲಿ ಯಾವಾಗಲೂ ನೀರಿನ ಕೊರತೆ ಇತ್ತು . ನಮ್ಮ ತಂದೆಯವರ ಕಾಲದಲ್ಲಿ ಬೋರವೆಲ್ ಮೂಲಕ ನೀರು ಕೊಡಲಾಗಿತ್ತು. ಗ್ರಾಮದಲ್ಲಿ ಸವಳು ನೀರು ಇರೋದ್ರಿಂದ ಪಕ್ಕದ ಶಿರೂರ ಗ್ರಾಮದಿಂದ ನಾನು ನೀರು ತಂದಿರೋದು ನೆನಪು ಇದೆ. ಆದರೀಗ ನರೇಂದ್ರ ಆಶೀರ್ವಾದಿಂದ ಜಲಜೀವನ ಮಿಷನ್ ನಿಂದ ಪ್ರತಿಯೊಂದು ಮನೆಗೆ ನೀರಿನ ವ್ಯವಸ್ಥೆ ಮಾಡಿದ್ದೇವೆ. ಬಹಳ ವರ್ಷದ ನೀರಿನ ಸಮಸ್ಯೆ ಬಗೆ ಹರಿದಿರೋದು ಸಂತಸ ತಂದಿದೆ. ಊರಿನ ಮಗ ರಾಜ್ಯದ ಮುಖ್ಯಸ್ಥರಾದಾಗ ಗ್ರಾಮದ ಜನರು ಬಹಳ ಪ್ರೀತಿ ವಿಶ್ವಾಸ ತೋರಿಸಿ ಹರಸಿದ್ದಾರೆ. ಬಹಳ ದಿನಗಳ ನಂತರ ನಮ್ಮ ಗ್ರಾಮಕ್ಕೆ ಬಂದಿದ್ದೇನೆ ಎಂದ ಸಿಎಂ
ಇದಕ್ಕೂ ಮುಂಚೆ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟ ಮುಖ್ಯಮಂತ್ರಿಗೆ ಅದ್ಧೂರಿ ‌ಸ್ವಾಗತ ನೀಡಲಾಗಿದ್ದು ಅವರು ತಮ್ಮ ಮನೆಯಲ್ಲಿ ಮಂಡಕ್ಕಿ ಮಿರ್ಚಿ ಸವಿದರು. ನಂತರ ಗ್ರಾಮ ದೇವತೆಯ ದರ್ಶನ ಪಡೆದ ಸಿಎಂಗೆ ಬಿಜೆಪಿ ಟಿಕೇಟ್ ಆಕಾಂಕ್ಷಿಗಳಾದ ಎಸ್ ಐ ಚಿಕ್ಕನಗೌಡರ, ಎಂ.ಆರ್ ಪಾಟೀಲ್ ಸಾಥ್ ತೆರಳಿದರು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago