Latest

ಕಣ್ಣೀರು ಹಾಕಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ತಮ್ಮ ಹಳೆ ಸ್ನೇಹಿತರು ಸಂಬಂಧಿಕರನ್ನು ನೋಡಿ ಭಾವುಕಾರದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ಕಣ್ಣೀರು ಹಾಕಿದರು. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿರುವ ತಮ್ಮ ತಂದೆ ತಾಯಿ ಜನಿಸಿದ ಬಾಳಿ ಬದುಕಿದ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಆ ಸಂದರ್ಭ ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿ ಕಣ್ಣೀರಿಟ್ಟರು.
ಇದೇ ಸಂದರ್ಭ ಅವರು ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯವನ್ನು ಸಿಎಂ ಬೊಮ್ಮಾಯಿ ನೆನೆದರು. ಇದೇ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದು ‘ನಮ್ಮ ಪೂರ್ವಜರು ಬದುಕಿ ಬಾಳಿದಂತಹ ಮನೆ. ನಮ್ಮ ತಂದೆ ಇದ್ದಂತಹ ಮನೆ, ಎಲ್ಲ ಹಿರಿಯರು, ಸ್ನೇಹಿತರು ನೆನಪಾಗ್ತಾರೆ. ಚಿಕ್ಕಂದಿನಲ್ಲಿ ಸ್ನೇಹಿತರು ಜತೆಗೆ ಕಳೆದ ಆಟಗಳು ಕ್ಷಣಗಳ ಎಲ್ಲವೂ ನೆನಪು ಆಗುತ್ತೆ.
ಬಹಳ ಸುಂದರ ಗ್ರಾಮ ನನ್ನದು ಒಳ್ಳೆಯ ಕೆರೆ,ದೇವಸ್ಥಾನಗಳಿವೆ. 52 ದಶಕಗಳ ಹಿಂದೆಯೇ ಒಳ್ಳೆಯದು ಲೈಬ್ರರಿ ಇರೋ ಗ್ರಾಮ ನಮ್ಮದು. ನಮ್ಮ ಗ್ರಾಮದಲ್ಲಿ ಫಲವತ್ತಾದ ಜಮೀನು‌ ಇದೆ. ಕಷ್ಟಪಟ್ಟು ದುಡಿಯುವ ಜನ ಬಹಳ ಸಜ್ಜನರು. ಗ್ರಾಮದಲ್ಲಿ ಯಾವಾಗಲೂ ನೀರಿನ ಕೊರತೆ ಇತ್ತು . ನಮ್ಮ ತಂದೆಯವರ ಕಾಲದಲ್ಲಿ ಬೋರವೆಲ್ ಮೂಲಕ ನೀರು ಕೊಡಲಾಗಿತ್ತು. ಗ್ರಾಮದಲ್ಲಿ ಸವಳು ನೀರು ಇರೋದ್ರಿಂದ ಪಕ್ಕದ ಶಿರೂರ ಗ್ರಾಮದಿಂದ ನಾನು ನೀರು ತಂದಿರೋದು ನೆನಪು ಇದೆ. ಆದರೀಗ ನರೇಂದ್ರ ಆಶೀರ್ವಾದಿಂದ ಜಲಜೀವನ ಮಿಷನ್ ನಿಂದ ಪ್ರತಿಯೊಂದು ಮನೆಗೆ ನೀರಿನ ವ್ಯವಸ್ಥೆ ಮಾಡಿದ್ದೇವೆ. ಬಹಳ ವರ್ಷದ ನೀರಿನ ಸಮಸ್ಯೆ ಬಗೆ ಹರಿದಿರೋದು ಸಂತಸ ತಂದಿದೆ. ಊರಿನ ಮಗ ರಾಜ್ಯದ ಮುಖ್ಯಸ್ಥರಾದಾಗ ಗ್ರಾಮದ ಜನರು ಬಹಳ ಪ್ರೀತಿ ವಿಶ್ವಾಸ ತೋರಿಸಿ ಹರಸಿದ್ದಾರೆ. ಬಹಳ ದಿನಗಳ ನಂತರ ನಮ್ಮ ಗ್ರಾಮಕ್ಕೆ ಬಂದಿದ್ದೇನೆ ಎಂದ ಸಿಎಂ
ಇದಕ್ಕೂ ಮುಂಚೆ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟ ಮುಖ್ಯಮಂತ್ರಿಗೆ ಅದ್ಧೂರಿ ‌ಸ್ವಾಗತ ನೀಡಲಾಗಿದ್ದು ಅವರು ತಮ್ಮ ಮನೆಯಲ್ಲಿ ಮಂಡಕ್ಕಿ ಮಿರ್ಚಿ ಸವಿದರು. ನಂತರ ಗ್ರಾಮ ದೇವತೆಯ ದರ್ಶನ ಪಡೆದ ಸಿಎಂಗೆ ಬಿಜೆಪಿ ಟಿಕೇಟ್ ಆಕಾಂಕ್ಷಿಗಳಾದ ಎಸ್ ಐ ಚಿಕ್ಕನಗೌಡರ, ಎಂ.ಆರ್ ಪಾಟೀಲ್ ಸಾಥ್ ತೆರಳಿದರು.

ಭ್ರಷ್ಟರ ಬೇಟೆ

Recent Posts

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

2 hours ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

3 hours ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

7 hours ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

7 hours ago

ಪತಿಯ ಅಕ್ರಮ ಸಂಬಂಧದ ರಹಸ್ಯ ಬಯಲು ಮಾಡಲು ಸಾಕ್ಷ್ಯ ಸಂಗ್ರಹಿಸಿದ್ದ ಪತ್ನಿ ನಿಗೂಢ ಸಾವು: ಕೊಲೆ ಶಂಕೆ!

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್‌ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…

7 hours ago

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

19 hours ago