Latest

ಕಣ್ಣೀರು ಹಾಕಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ತಮ್ಮ ಹಳೆ ಸ್ನೇಹಿತರು ಸಂಬಂಧಿಕರನ್ನು ನೋಡಿ ಭಾವುಕಾರದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ಕಣ್ಣೀರು ಹಾಕಿದರು. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿರುವ ತಮ್ಮ ತಂದೆ ತಾಯಿ ಜನಿಸಿದ ಬಾಳಿ ಬದುಕಿದ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಆ ಸಂದರ್ಭ ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿ ಕಣ್ಣೀರಿಟ್ಟರು.
ಇದೇ ಸಂದರ್ಭ ಅವರು ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯವನ್ನು ಸಿಎಂ ಬೊಮ್ಮಾಯಿ ನೆನೆದರು. ಇದೇ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದು ‘ನಮ್ಮ ಪೂರ್ವಜರು ಬದುಕಿ ಬಾಳಿದಂತಹ ಮನೆ. ನಮ್ಮ ತಂದೆ ಇದ್ದಂತಹ ಮನೆ, ಎಲ್ಲ ಹಿರಿಯರು, ಸ್ನೇಹಿತರು ನೆನಪಾಗ್ತಾರೆ. ಚಿಕ್ಕಂದಿನಲ್ಲಿ ಸ್ನೇಹಿತರು ಜತೆಗೆ ಕಳೆದ ಆಟಗಳು ಕ್ಷಣಗಳ ಎಲ್ಲವೂ ನೆನಪು ಆಗುತ್ತೆ.
ಬಹಳ ಸುಂದರ ಗ್ರಾಮ ನನ್ನದು ಒಳ್ಳೆಯ ಕೆರೆ,ದೇವಸ್ಥಾನಗಳಿವೆ. 52 ದಶಕಗಳ ಹಿಂದೆಯೇ ಒಳ್ಳೆಯದು ಲೈಬ್ರರಿ ಇರೋ ಗ್ರಾಮ ನಮ್ಮದು. ನಮ್ಮ ಗ್ರಾಮದಲ್ಲಿ ಫಲವತ್ತಾದ ಜಮೀನು‌ ಇದೆ. ಕಷ್ಟಪಟ್ಟು ದುಡಿಯುವ ಜನ ಬಹಳ ಸಜ್ಜನರು. ಗ್ರಾಮದಲ್ಲಿ ಯಾವಾಗಲೂ ನೀರಿನ ಕೊರತೆ ಇತ್ತು . ನಮ್ಮ ತಂದೆಯವರ ಕಾಲದಲ್ಲಿ ಬೋರವೆಲ್ ಮೂಲಕ ನೀರು ಕೊಡಲಾಗಿತ್ತು. ಗ್ರಾಮದಲ್ಲಿ ಸವಳು ನೀರು ಇರೋದ್ರಿಂದ ಪಕ್ಕದ ಶಿರೂರ ಗ್ರಾಮದಿಂದ ನಾನು ನೀರು ತಂದಿರೋದು ನೆನಪು ಇದೆ. ಆದರೀಗ ನರೇಂದ್ರ ಆಶೀರ್ವಾದಿಂದ ಜಲಜೀವನ ಮಿಷನ್ ನಿಂದ ಪ್ರತಿಯೊಂದು ಮನೆಗೆ ನೀರಿನ ವ್ಯವಸ್ಥೆ ಮಾಡಿದ್ದೇವೆ. ಬಹಳ ವರ್ಷದ ನೀರಿನ ಸಮಸ್ಯೆ ಬಗೆ ಹರಿದಿರೋದು ಸಂತಸ ತಂದಿದೆ. ಊರಿನ ಮಗ ರಾಜ್ಯದ ಮುಖ್ಯಸ್ಥರಾದಾಗ ಗ್ರಾಮದ ಜನರು ಬಹಳ ಪ್ರೀತಿ ವಿಶ್ವಾಸ ತೋರಿಸಿ ಹರಸಿದ್ದಾರೆ. ಬಹಳ ದಿನಗಳ ನಂತರ ನಮ್ಮ ಗ್ರಾಮಕ್ಕೆ ಬಂದಿದ್ದೇನೆ ಎಂದ ಸಿಎಂ
ಇದಕ್ಕೂ ಮುಂಚೆ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟ ಮುಖ್ಯಮಂತ್ರಿಗೆ ಅದ್ಧೂರಿ ‌ಸ್ವಾಗತ ನೀಡಲಾಗಿದ್ದು ಅವರು ತಮ್ಮ ಮನೆಯಲ್ಲಿ ಮಂಡಕ್ಕಿ ಮಿರ್ಚಿ ಸವಿದರು. ನಂತರ ಗ್ರಾಮ ದೇವತೆಯ ದರ್ಶನ ಪಡೆದ ಸಿಎಂಗೆ ಬಿಜೆಪಿ ಟಿಕೇಟ್ ಆಕಾಂಕ್ಷಿಗಳಾದ ಎಸ್ ಐ ಚಿಕ್ಕನಗೌಡರ, ಎಂ.ಆರ್ ಪಾಟೀಲ್ ಸಾಥ್ ತೆರಳಿದರು.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

5 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

5 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

9 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

9 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

9 hours ago