Latest

ಅದ್ದೂರಿಯಾಗಿ ನಡೆದ ಚಿಗಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ..!

ಮುಂಡಗೋಡ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಕ್ಷೇತ್ರ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಮುಂಡಗೋಡ. ಶಿರಸಿ ಶೈಕ್ಷಣಿಕ ಜಿಲ್ಲೆ
ಸಮೂಹ‌ ಸಂಪನ್ಮೂಲ ಕೇಂದ್ರ ಚಿಗಳ್ಳಿ ಹಾಗೂ ಎಸ್ ಡಿ ಸಿ ಕೆ ಸರಕಾರಿ ಪ್ರೌಢ ಶಾಲೆ ಚಿಗಳ್ಳಿ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿ ತಾಲೂಕ: ಮುಂಡಗೋಡ, ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ/ಪ್ರೌಢ ಶಾಲೆಗಳ ಕಲಿಕಾ ಹಬ್ಬ ಇಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಗ್ರಾಮದ ಶ್ರೀ ಗುರು ವೀರೇಶ್ವರ ಚೌಕಿ ಮಠ ಆವರಣದಿಂದ ಪೂರ್ಣ ಕುಂಭಮೇಳ, ಎತ್ತಿನ ಬಂಡಿ,ಹಾಗೂ ವಿವಿಧ ಸಾಂಸ್ಕೃತಿಕ ಜನಪದ ವೇಷಭೂಷಣಗಳೊಂದಿಗೆ ಅಲಂಕೃತಗೊಂಡ ಶಾಲಾ ವಿದ್ಯಾರ್ಥಿಗಳ ತಂಡಗಳನ್ನು ಚಿಗಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾದ ಶ್ರೀಮತಿ ಭಾರತಿ ನಿಂಬಾಯಿ ಅವರು ಹಾಗೂ ಗ್ರಾಮ ಪಂಚಾಯತನ ಸರ್ವ ಸದಸ್ಯರು ಕಲಿಕಾ ಹಬ್ಬದ ವೃತ್ತಗಳನ್ನು ಬೀಸುವುದರೊಂದಿಗೆ ಚಾಲನೆ ನೀಡಿದರು.
ತದನಂತರ ಕಲಿಕಾ ಹಬ್ಬದ ಹಾಡುಗಳನ್ನು ಹಾಡುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ಸಂಚರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿಯ ಆವರಣಕ್ಕೆ ಬರಲಾಯಿತು. ಕಲಿಕಾ ಹಬ್ಬದ ಹಾಡುಗಳೊಂದಿಗೆ ವೇದಿಕೆ ಮೇಲಿರುವ ಗಣ್ಯರನ್ನು ವಿದ್ಯಾರ್ಥಿಗಳು ಸ್ವಾಗತಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ. ಸಿ ಅಧ್ಯಕ್ಷರಾದ ಶ್ರೀ ಪರಶುರಾಮ ಷ ತೆಗ್ಗಳ್ಳಿ ವಹಿಸಿಕೊಂಡಿದ್ದರು. ಚಿಗಳ್ಳಿ ಸಿ ಆರ್ ಪಿ ಶ್ರೀ ಪ್ರಶಾಂತ್ ಸಾವಳಗಿ ಪ್ರಸ್ತಾವಿಕವಾಗಿ ಮಾತನಾಡಿ, ಇಲಾಖೆ ಹಮ್ಮಿಕೊಂಡಿರುವ ಈ ಕಲಿಕಾ ಹಬ್ಬದ ಮಹತ್ವ, ಉದ್ದೇಶಗಳು ಹಾಗೂ ಪಾಲಕರ ಜವಾಬ್ದಾರಿಯ ಬಗ್ಗೆ ವಿವರಿಸಿದರು. ಚಿಗಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾದ ಶ್ರೀಮತಿ ಭಾರತಿ ನಿಂಬಾಯಿರವರು ವಿಜ್ಞಾನ ವಿಸ್ಮಯ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮದ ಹಿರಿಯರಾದ ಶ್ರೀ ಎಂ ಪಿ ಕುಸೂರವರು ಅತಿಥಿಗಳಾಗಿ ಮಾತನಾಡಉತ್ತಾ ನಮ್ಮ ಸಂಸ್ಕ್ರತಿ, ಸಂಪ್ರದಾಯ, ಜಾನಪದ ಹಿರಿಮೆ, ಗ್ರಾಮೀಣ ಬದುಕಿನ ಸೊಗಡಿನ ಬಗ್ಗೆ ಮಕ್ಕಳಿಗೆ ಕಿವಿಮಾತು ಹೇಳಿದರು. ಗ್ರಾಮ ಪಂಚಾಯತ ಸದಸ್ಯರಾದ ಶ್ರೀ ಪರಶುರಾಮ ಟಿಕ್ಕೋಜಿಯವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಣ ಸಂಯೋಜಕ ಪಾಂಡುರಂಗ ಟಿಕ್ಕೋಜಿ ಅವರು ಕಾರ್ಯಕ್ರಮ ಕುರಿತು ಮಾತನಾಡಿ ಶಿಕ್ಷಕರ ಪ್ರತಿಭೆ ಹಾಗೂ ಶ್ರಮದ ಸಾರ್ಥಕತೆಯನ್ನು ಮಕ್ಕಳು ಬಳಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ಶ್ರೀ ಜಾದವ ಕಲಿಕಾ ಚೇತರಿಕೆ ವರ್ಷ ಹಾಗೂ ಕಲಿಕಾ ಹಬ್ಬದ ಬಗ್ಗೆ ತನ್ನ ಅನಿಸಿಕೆ ವ್ಯಕ್ತಪಡಿಸಿದಳು.
ನಂತರ ಶ್ರೀಮತಿ ದೇವಕಿ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆ ಚಿಗಳ್ಳಿ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಿದ್ದನ ಕೊಪ್ಪ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನೆರವೇರಿತು. ಗ್ರಾಮ ಪಂಚಾಯತ ಸದಸ್ಯರುಗಳಾದ ಶ್ರೀ ಪ್ರಭುಲಿಂಗ ಕೆಂಣ್ಣನವರ, ಶ್ರೀ ಉದಯ ಕುಸೂರ ಶ್ರೀಮತಿ ರಹೀಮಾ ಮಕ್ತೇಸರ್ ರವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀ ಶಿವಾಜಿ ವಾಸಂಬಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ದಾಸಪ್ಪ, ಎ , ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಪಕ್ಕೀರಸ್ವಾಮಿ ಹುಲಿಯವರ ಹಾಗೂ ಎರಡೂ ಶಾಲೆಗಳ ಎಸ್.ಡಿ.ಎಮ್.ಸಿ ಯ ಸರ್ವ ಸದಸ್ಯರು ಮತ್ತು ಶಿಕ್ಷಕ ವೃಂದ, ಸೊಸೈಟಿಯ ನಿರ್ದೇಶಕರುಗಳು, ಕ್ಲಸ್ಟರನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಅಶೋಕ ಹಂಚಿನಮನೆ ಸ್ವಾಗತಿಸಿದರು, ಬಸವರಾಜ ಬೆಂಡ್ಲಗಟ್ಟಿ ನಿರೂಪಿಸಿದರು,ಕೆ ಕೆ ಕರುವಿನಕೊಪ್ಪ ವಂದಸಿದರು.
ನಂತರ ನಾಲ್ಕು ಕೊಠಡಿಗಳ ಆಡು-ಹಾಡು, ಕಾಗದ – ಕತ್ತರಿ, ಬಣ್ಣ, ಮಾಡು-ಆಡು, ಹಾಗೂ ಊರು ಸುತ್ತೋಣ ಎಂಬ ಹೆಸರಿನ ನಾಲ್ಕು ಕಲಿಕಾ ಮೂಲೆಗಳಲ್ಲಿ ಕಲಿಕಾ ಹಬ್ಬದ ಚಟುವಟಿಕೆಗಳು ಜರುಗಿದವು.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

12 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

12 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

12 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

18 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

18 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

18 hours ago