Categories: Latest

ಮುಂಡಗೋಡಿನಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತ್ವರಿತ ಕಾರ್ಯಾಚರಣೆ, ಅಪ್ರಾಪ್ತೆಯ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆಯಲಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸಮಯೋಚಿತವಾಗಿ ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳ ಸಹಾಯವಾಣಿ (1098)ಗೆ ಬಂದ ದೂರಿನ ಆಧಾರದ ಮೇಲೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಅಪ್ರಾಪ್ತ ಬಾಲಕಿಯ ಭವಿಷ್ಯವನ್ನು ರಕ್ಷಿಸಿದ್ದಾರೆ.

ಜುಲೈ 9, 2026ರಂದು ಮಕ್ಕಳ ಸಹಾಯವಾಣಿಗೆ ಮುಂಡಗೋಡು ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಬಾಲ್ಯ ವಿವಾಹ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಮಾಹಿತಿ ಪಡೆದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ಎನ್. ಅವರು ವಿಶೇಷ ತಂಡವನ್ನು ರಚಿಸಿ ಸ್ಥಳಕ್ಕೆ ಕಳುಹಿಸಿದ್ದರು.

ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ಜಿ. ಅವರು ಬಾಲ್ಯ ವಿವಾಹದ ಕಾನೂನು ಪರಿಣಾಮಗಳು ಹಾಗೂ ಅದರ ದುಷ್ಪರಿಣಾಮಗಳ ಕುರಿತು ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿದರು.

ಬಳಿಕ ಬಾಲಕಿಯ ತಂದೆ-ತಾಯಿಯಿಂದ ಇನ್ನು ಮುಂದೆ ಬಾಲ್ಯ ವಿವಾಹ ನಡೆಸುವುದಿಲ್ಲ ಎಂಬ ಮುಚ್ಚಳಿಕೆ ಪತ್ರವನ್ನು ಪಡೆದುಕೊಳ್ಳಲಾಯಿತು. ಇದೇ ವೇಳೆ ರಕ್ಷಣಾಧಿಕಾರಿ ವಿಶ್ವನಾಥ್ ಅಶೋಕ್ ನಾಯಕ್ ಅವರು ಬಾಲಕಿಯ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮಹತ್ವವನ್ನು ವಿವರಿಸಿ ಕುಟುಂಬಕ್ಕೆ ಸೂಕ್ತ ಸಲಹೆ ಮತ್ತು ಸಾಂತ್ವನ ನೀಡಿದರು.

ಮಕ್ಕಳ ಸಹಾಯವಾಣಿ ಸಿಬ್ಬಂದಿ ಆಶಾ ಫರ್ನಾಂಡಿಸ್ ಅವರು ಇಂತಹ ಘಟನೆಗಳು ಕಂಡುಬಂದರೆ ತಕ್ಷಣ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ಎನ್. ಅವರ ತ್ವರಿತ ಕ್ರಮದಿಂದ ಬಾಲ್ಯ ವಿವಾಹವನ್ನು ಯಶಸ್ವಿಯಾಗಿ ತಡೆಯಲು ಸಾಧ್ಯವಾಗಿದ್ದು, ಕಾರ್ಯಾಚರಣೆಯಲ್ಲಿ ಮಾಜಿ ಶಾಸಕ ವಿ.ಎಸ್. ಪಾಟೀಲ್, ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಸಿಬ್ಬಂದಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ: ಮಂಜುನಾಥ್ ಮೊಗೇರ

ಭ್ರಷ್ಟರ ಬೇಟೆ

Recent Posts

ಚಿಪ್ಪಿಕಲ್ಲು ದುರಂತದ ನೋವು ತಾಳಲಾರದೆ ಯುವಕ ಸಾವು; ತಾಯಿಯನ್ನು ಕಳೆದುಕೊಂಡ ಕುಟುಂಬಕ್ಕೆ ಮತ್ತೊಂದು ಆಘಾತ

ಭಟ್ಕಳ: ವೆಂಕಟಾಪುರ ನದಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಚಿಪ್ಪಿಕಲ್ಲು ದುರಂತದಲ್ಲಿ ತಾಯಿಯನ್ನು ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಟುಂಬದವರನ್ನು ಹಾಗೂ…

8 hours ago

ಕೆಬಿಜೆಎನ್ಎಲ್ ಶಾಖಾ ಕಾಲುವೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ; ರೈತರ ಆಕ್ರೋಶ, ಹೋರಾಟದ ಎಚ್ಚರಿಕೆ

ವಿಜಯಪುರ: ರೈತರಿಗೆ ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅದರ ಭಾಗವಾಗಿ ಬಸವನ ಬಾಗೇವಾಡಿ…

9 hours ago

₹79.36 ಲಕ್ಷ ವೆಚ್ಚದ ಲಿಂಗಣ್ಣ ಕಾಲೋನಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮೊದಲ ಹಂತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಉದ್ದೇಶದಿಂದ ಬಳ್ಳಾರಿ ನಗರದ ಗಾಂಧಿನಗರ 22ನೇ ವಾರ್ಡ್‌ನ ಸೊಂತ ಲಿಂಗಣ್ಣ ಕಾಲೋನಿಯ…

9 hours ago

ಅನಾಥ ಬಾಲಕಿಯ ಬದುಕು ಸೂಟ್‌ಕೇಸ್‌ನಲ್ಲಿ ಅಂತ್ಯ: ವರ್ಷದ ಬಳಿಕ ಅರಣ್ಯದಲ್ಲಿ ಬಯಲಾಯ್ತು ಭೀಕರ ರಹಸ್ಯ!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತರಲಘಟ್ಟದಲ್ಲಿ ನಡೆದಿರುವ 14 ವರ್ಷದ ಅನಾಥ ಬಾಲಕಿ ಸಂಗೀತಾ ಸಾವಿನ ಪ್ರಕರಣವು ವರ್ಷ ಕಳೆದ…

10 hours ago

ಅನುಕಂಪದ ಸರ್ಕಾರಿ ಉದ್ಯೋಗದ ಆಸೆಗೆ ಹೆತ್ತ ತಾಯಿಯನ್ನೇ ಕೊಲ್ಲಿಸಿದ ಮಗಳು; ರಸ್ತೆ ಅಪಘಾತದ ಹಿಂದಿನ ಸಂಚು ಬಯಲು!

ರಾಜಸ್ಥಾನದ ಜೈಪುರದಲ್ಲಿ ಮನಸ್ಸು ಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಅನುಕಂಪದ ಆಧಾರದ ಸರ್ಕಾರಿ ಉದ್ಯೋಗ ಮತ್ತು ಆಸ್ತಿಯ ಆಸೆಯಿಂದ 23…

10 hours ago

13 ವರ್ಷದ ಬಾಲಕಿಯ ಮೇಲಿನ ಅಮಾನವೀಯ ದೌರ್ಜನ್ಯ: ಐದು ದಿನಗಳ ಹೋರಾಟದ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಮಗು

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯೊಬ್ಬಳನ್ನು ಆಟೋ ಚಾಲಕ ಅಪಹರಿಸಿ ಹೋಟೆಲ್…

10 hours ago