Crime

ಮಗುವಿನ ಮಾರಾಟದ ಕೃತ್ಯ ಬಯಲು: 7 ವರ್ಷದ ಬಾಲಕ 4 ಲಕ್ಷಕ್ಕೆ ಹರಾಜಾದ.!

ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರ ವಿವರಗಳು:

1. ಸದಾಶಿವ ಶಿವಬಸಪ್ಪ ಮಗದುಮ್ – ಮಗುವಿನ ಮಲತಂದೆ, ಸುಲ್ತಾನಪುರ ಮೂಲದವನು.

2. ಲಕ್ಷ್ಮಿ ಬಾಬು ಗೋಲಭಾವಿ – ಮೂಲತಃ ಭಡಗಾಂವ್‌ವಾಸಿ, ಪ್ರಸ್ತುತ ಸುಲ್ತಾನಪುರದಲ್ಲಿ ವಾಸವಿರುವವರು.

3. ಸಂಗೀತಾ ವಿಷ್ಣು ಸಾವಂತ್ – ಕೊಲ್ಲಾಪುರದ ನಾಗಲಾ ಪಾರ್ಕ್ ನಿವಾಸಿ.

4. ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ – ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ನಿವಾಸಿ.

 

ಪ್ರಕರಣದ ವಿವರಗಳು:
ಶಿವಬಸಪ್ಪ ಮಗದುಮ್ ಮತ್ತು ಕಾರವಾರ-ಕೊಲ್ಲಾಪುರದ ಕೆಲವು ಮಧ್ಯವರ್ತಿಗಳು ಸೇರಿ, ಬಾಲಕನನ್ನು ಬೆಳಗಾವಿ ನಿವಾಸಿಯಾದ ದಿಲಶಾದ್ ಸಿಕಂದರ್ ತಹಸೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪ ತಲುಪಿದೆ. ದಿಲಶಾದ್ ಅವರು ಎರಡು ಹೆಣ್ಣುಮಕ್ಕಳ ತಾಯಿ, ಗಂಡು ಮಗುವಿನ ಆಸೆ ಹೊಂದಿದ್ದರೆಂದು ತಿಳಿದುಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಮಾಹಿತಿ ನೀಡಿದ್ದಾರೆ.

ಘಟನೆಯ ಹಿನ್ನೆಲೆ:
ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ ಅವರನ್ನು ಸದಾಶಿವ ಶಿವಬಸಪ್ಪ ಮಗದುಮ್ ಮದುವೆಯಾಗಿದ್ದರು. ಮಗದುಮ್ ಅವರಿಗೆ ಮೊದಲ ಮದುವೆಯಿಂದಲೇ ಮಕ್ಕಳು ಇದ್ದರು, ಆದರೆ ಕುಟುಂಬದ ಆಂತರಿಕ ಜಗಳಗಳಿಂದ ಬೇಸರಗೊಂಡ ಅವರು ಮಗುವನ್ನು ಮಾರಾಟಕ್ಕೆ ಮುಂದಾಗಿದ್ದಾರೆ.

ಲಕ್ಷ್ಮಿ ಬಾಬು ಗೋಲಭಾವಿ, ಸಂಗೀತಾ ಸಾವಂತ್, ಮತ್ತು ಅನಸೂಯಾ ದೊಡ್ಮನಿ ಈ ಯೋಜನೆಗೆ ಸಹಾಯ ಮಾಡಿದ್ದು, ಅನಸೂಯಾ ಬಾಲಕನನ್ನು ಅನಾಥ ಎಂದು ಹೇಳಿ ದಿಲಶಾದ್‌ಗ್‌ ಮಾರಾಟ ಮಾಡಿದಂತೆ ವರದಿ ಬಂದಿದೆ.

ತಹನಿಗೆ ದೂರು ಮತ್ತು ತನಿಖೆ:
ಬಾಲಕನ ತಾಯಿ ಸಂಗೀತಾ ಕಮ್ಮಾರ್ ಮಗ ಕಾಣೆಯಾಗಿರುವ ಬಗ್ಗೆ ದೂರು ಸಲ್ಲಿಸಿದರು. ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಬೈಲಹೊಂಗಲ ಸಮೀಪದ ಗ್ರಾಮವೊಂದರಲ್ಲಿ ಬಾಲಕನನ್ನು ಪತ್ತೆಹಚ್ಚಿದ್ದಾರೆ.

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

18 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

23 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

23 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

23 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

23 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

23 hours ago