Latest

ಬೆಳಗಾವಿಯಲ್ಲಿ ಮಗು ಮಾರಾಟ ಜಾಲ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಗು ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಹುಕ್ಕೇರಿ ಠಾಣೆ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರಾದವರು ಮಹಾರಾಷ್ಟ್ರ ಮೂಲದ ಸಂಗೀತಾ ಗೌಳಿ, ಸಂಗೀತಾ ತಾವಡೆ ಮತ್ತು ಮೋಹನ್ ತಾವಡೆ ಎಂದು ಗುರುತಿಸಲಾಗಿದೆ. ಇನ್ನುಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ ಮತ್ತು ನಂದಿನಿ ಡೋರಲೇಕರರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ವಿಧವೆಯರನ್ನೇ ಟಾರ್ಗೆಟ್ ಮಾಡುವ ಗ್ಯಾಂಗ್
ಈ ಮಾಫಿಯಾದು ವಿಧವೆಯರನ್ನು ಟಾರ್ಗೆಟ್ ಮಾಡಿ, ಅವರಿಗೂ ಎರಡನೇ ಮದುವೆ ವ್ಯವಸ್ಥೆ ಮಾಡುತ್ತಿತ್ತು. ಮದುವೆಯ ನಂತರ, ಮಹಿಳೆಯ ಮೊದಲ ದಾಂಪತ್ಯದಿಂದ ಹುಟ್ಟಿದ ಮಗುವನ್ನು ದುರುಪಯೋಗಕ್ಕೆ ಬಳಸುತ್ತಿದ್ದರು.

ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರ ಗ್ರಾಮಕ್ಕೆ ಸೇರಿದ ಅರ್ಚನಾ ಎಂಬ ಮಹಿಳೆಯನ್ನು ಈ ಗ್ಯಾಂಗ್ ರಾಜು ಮಗ್ದುಮ ಎಂಬ ವ್ಯಕ್ತಿಗೆ ಮದುವೆ ಮಾಡಿಸಿತ್ತು. ಅರ್ಚನಾ ಅವರ ಮೊದಲ ದಾಂಪತ್ಯದಿಂದ ಹುಟ್ಟಿದ್ದ ಮಗುವು ಅನಾರೋಗ್ಯದಿಂದ ಬಳಲುತ್ತಿತ್ತು. ಆರೋಪಿ ತಾವಡೆ ದಂಪತಿ ಮಗುವಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಆ ಮಗುವನ್ನು ಮಹಾರಾಷ್ಟ್ರದ ಗಡಹಿಂಗ್ಲಜ್‌ಗೆ ಕರೆದುಕೊಂಡು ಹೋಗಿ, ಸಂಗೀತಾ ಗೌಳಿಯ ಮನೆಗೆ ಕೊಂಡೊಯ್ದರು.

ಅಲ್ಲಿ, ಮಗುವನ್ನು ನಂದಕುಮಾರ ಡೋರಲೇಕರ ಮತ್ತು ಅವರ ಪತ್ನಿಗೆ 3 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಈ ವಹಿವಾಟಿನಿಂದ ಬಂದ ಹಣವನ್ನು ತಾವಡೆ ದಂಪತಿ ಮತ್ತು ಸಂಗೀತಾ ಗೌಳಿ ಹಂಚಿಕೊಂಡಿದ್ದರು.

ಹುಕ್ಕೇರಿ ಪೊಲೀಸರ ದಾಳಿಯಲ್ಲಿ ಮೂವರ ಬಂಧನ
ಈ ಪ್ರಕರಣ ಸಂಬಂಧ ಹುಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.

ಹಿಂದಿನ ಪ್ರಕರಣದ ಬದಲಾದ ಮಾದರಿ
ವಾರದ ಹಿಂದೆ ಇದೇ ಊರಲ್ಲಿ ಸಂಗೀತಾ ಎಂಬ ಇನ್ನೊಬ್ಬ ಮಹಿಳೆ ಈ ಗ್ಯಾಂಗ್‌ ಹಾಸಿಗೆ ಬಿದ್ದಿದ್ದರು. ಅವಳಿಗೂ ಎರಡನೇ ಮದುವೆ ವ್ಯವಸ್ಥೆ ಮಾಡಿ, ಅವಳ ಮೊದಲ ಮಗುವನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಆ ಪ್ರಕರಣದಲ್ಲಿ ಹುಕ್ಕೇರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಈ ಶ್ರೇಣಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಮಗುವಿನ ಮಾರಾಟ ಪ್ರಕರಣಗಳು ಆತಂಕಕಾರಿ ಬೆಳವಣಿಗೆಗಳಾಗಿದ್ದು, ಪೊಲೀಸರು ಪ್ರಸ್ತುತ ಈ ಮಾಫಿಯಾವನ್ನು ಸಂಪೂರ್ಣವಾಗಿ ನಿಗ್ರಹಿಸಲು ತೀವ್ರ ತನಿಖೆ ಮುಂದುವರಿಸಿದ್ದಾರೆ

nazeer ahamad

Recent Posts

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

7 minutes ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

19 minutes ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

10 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

10 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

13 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

15 hours ago