ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಗು ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಹುಕ್ಕೇರಿ ಠಾಣೆ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರಾದವರು ಮಹಾರಾಷ್ಟ್ರ ಮೂಲದ ಸಂಗೀತಾ ಗೌಳಿ, ಸಂಗೀತಾ ತಾವಡೆ ಮತ್ತು ಮೋಹನ್ ತಾವಡೆ ಎಂದು ಗುರುತಿಸಲಾಗಿದೆ. ಇನ್ನುಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ ಮತ್ತು ನಂದಿನಿ ಡೋರಲೇಕರರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ವಿಧವೆಯರನ್ನೇ ಟಾರ್ಗೆಟ್ ಮಾಡುವ ಗ್ಯಾಂಗ್
ಈ ಮಾಫಿಯಾದು ವಿಧವೆಯರನ್ನು ಟಾರ್ಗೆಟ್ ಮಾಡಿ, ಅವರಿಗೂ ಎರಡನೇ ಮದುವೆ ವ್ಯವಸ್ಥೆ ಮಾಡುತ್ತಿತ್ತು. ಮದುವೆಯ ನಂತರ, ಮಹಿಳೆಯ ಮೊದಲ ದಾಂಪತ್ಯದಿಂದ ಹುಟ್ಟಿದ ಮಗುವನ್ನು ದುರುಪಯೋಗಕ್ಕೆ ಬಳಸುತ್ತಿದ್ದರು.
ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರ ಗ್ರಾಮಕ್ಕೆ ಸೇರಿದ ಅರ್ಚನಾ ಎಂಬ ಮಹಿಳೆಯನ್ನು ಈ ಗ್ಯಾಂಗ್ ರಾಜು ಮಗ್ದುಮ ಎಂಬ ವ್ಯಕ್ತಿಗೆ ಮದುವೆ ಮಾಡಿಸಿತ್ತು. ಅರ್ಚನಾ ಅವರ ಮೊದಲ ದಾಂಪತ್ಯದಿಂದ ಹುಟ್ಟಿದ್ದ ಮಗುವು ಅನಾರೋಗ್ಯದಿಂದ ಬಳಲುತ್ತಿತ್ತು. ಆರೋಪಿ ತಾವಡೆ ದಂಪತಿ ಮಗುವಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಆ ಮಗುವನ್ನು ಮಹಾರಾಷ್ಟ್ರದ ಗಡಹಿಂಗ್ಲಜ್ಗೆ ಕರೆದುಕೊಂಡು ಹೋಗಿ, ಸಂಗೀತಾ ಗೌಳಿಯ ಮನೆಗೆ ಕೊಂಡೊಯ್ದರು.
ಅಲ್ಲಿ, ಮಗುವನ್ನು ನಂದಕುಮಾರ ಡೋರಲೇಕರ ಮತ್ತು ಅವರ ಪತ್ನಿಗೆ 3 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಈ ವಹಿವಾಟಿನಿಂದ ಬಂದ ಹಣವನ್ನು ತಾವಡೆ ದಂಪತಿ ಮತ್ತು ಸಂಗೀತಾ ಗೌಳಿ ಹಂಚಿಕೊಂಡಿದ್ದರು.
ಹುಕ್ಕೇರಿ ಪೊಲೀಸರ ದಾಳಿಯಲ್ಲಿ ಮೂವರ ಬಂಧನ
ಈ ಪ್ರಕರಣ ಸಂಬಂಧ ಹುಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.
ಹಿಂದಿನ ಪ್ರಕರಣದ ಬದಲಾದ ಮಾದರಿ
ವಾರದ ಹಿಂದೆ ಇದೇ ಊರಲ್ಲಿ ಸಂಗೀತಾ ಎಂಬ ಇನ್ನೊಬ್ಬ ಮಹಿಳೆ ಈ ಗ್ಯಾಂಗ್ ಹಾಸಿಗೆ ಬಿದ್ದಿದ್ದರು. ಅವಳಿಗೂ ಎರಡನೇ ಮದುವೆ ವ್ಯವಸ್ಥೆ ಮಾಡಿ, ಅವಳ ಮೊದಲ ಮಗುವನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಆ ಪ್ರಕರಣದಲ್ಲಿ ಹುಕ್ಕೇರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.
ಈ ಶ್ರೇಣಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಮಗುವಿನ ಮಾರಾಟ ಪ್ರಕರಣಗಳು ಆತಂಕಕಾರಿ ಬೆಳವಣಿಗೆಗಳಾಗಿದ್ದು, ಪೊಲೀಸರು ಪ್ರಸ್ತುತ ಈ ಮಾಫಿಯಾವನ್ನು ಸಂಪೂರ್ಣವಾಗಿ ನಿಗ್ರಹಿಸಲು ತೀವ್ರ ತನಿಖೆ ಮುಂದುವರಿಸಿದ್ದಾರೆ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…