Latest

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲೆ ಸ್ವಚ್ಚಗೊಳಿಕೆ : ಶಿಕ್ಷಕರ ವಿರುದ್ಧ ಸಾರ್ವಜನಿಕರ ಆಕ್ರೋಶ.

ಬೆಂಗಳೂರು ದಕ್ಷಿಣ ಕ್ಷೇತ್ರದ ವಿಶ್ವಪ್ರಿಯ ಲೇಔಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಒಂದು ಆಘಾತಕಾರಿ ಘಟನೆ. ಶಾಲೆಯ ಪುಟ್ಟ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಚಗೊಳಿಸಲು ಶಿಕ್ಷಕರು ಬಲವಂತ ಪಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಸಂಬಂಧದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಹೇಗೆ ನಡೆದಿದೆ?

ಬೆಂಗೂರು ಮುಖ್ಯರಸ್ತೆಯಲ್ಲಿರುವ ಈ ಸರ್ಕಾರಿ ಶಾಲೆಯಲ್ಲಿ ಶೌಚಾಲಯದ ಸಮಸ್ಯೆ ಸಾಕಷ್ಟು ದಿನಗಳಿಂದ ಮುಂದುವರಿಯುತ್ತಿತ್ತು. ಇದಕ್ಕಾಗಿ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅಂತಿಮವಾಗಿ, ಶಾಲೆಯ ಶಿಕ್ಷಕರೇ ಮಕ್ಕಳ ಕೈಯಲ್ಲಿ ಶೌಚಾಲಯವನ್ನು ಸ್ವಚ್ಚ ಮಾಡಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಕ್ರಿಯೆ ನೀಡಿದ್ದು, “ನಾನು ಮಕ್ಕಳಿಗೆ ಶೌಚಾಲಯ ಸ್ವಚ್ಚಗೊಳಿಸಲು ಹೇಳಿಲ್ಲ. ಗುಂಡಿ ತುಂಬಿ ಹೋಗಿದ್ದರಿಂದ ನಾನು ಸಹ ಶಿಕ್ಷಕರಿಗೆ ಸ್ವಚ್ಚಗೊಳಿಸುವಂತೆ ತಿಳಿಸಿದ್ದೆ. ಆದರೆ ಅವರು ಮಕ್ಕಳನ್ನು ಬಳಸಿಕೊಂಡಿದ್ದಾರೆ” ಎಂದು ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

ಪಿಟಿ ಟೀಚರ್ ಆರೋಪಕ್ಕೆ ಗುರಿ

ಈ ಪ್ರಕರಣದಲ್ಲಿ ಶಾಲೆಯ ಪಿಟಿ ಟೀಚರ್ ಸುಮಿತ್ರ ಅವರ ಹೆಸರು ಬಹಿರಂಗವಾಗಿದೆ. ಅವರು ಈ ಸಂಬಂಧ ಮಾತನಾಡಿ, “ನಾವು ಎಲ್ಲಾ ಶಿಕ್ಷಕರೂ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಆದರೆ ವೈರಲ್ ಆದ ವಿಡಿಯೋದಲ್ಲಿ ನನ್ನ ಧ್ವನಿಯಷ್ಟೇ ಕೇಳಿಸಿದೆ. ನನ್ನಿಂದ ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ” ಎಂದು ಬೇಡಿಕೊಂಡಿದ್ದಾರೆ.

ಈ ಘಟನೆಯ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಶಿಕ್ಷಕರ ವಿರುದ್ಧ ಕಿಡಿಕಾರಿದ್ದಾರೆ. “ಮಕ್ಕಳಿಗೆ ಪಾಠ ಹೇಳಿಸಬೇಕಾದ ಶಿಕ್ಷಕರು, ಅವರನ್ನು ಶೌಚಾಲಯ ಸ್ವಚ್ಚಗೊಳಿಸಲು ಕಟ್ಟಿ ಹಾಕುತ್ತಿದ್ದಾರೆ” ಎಂಬ ಆಕ್ರೋಶ ಜನಮನದಲ್ಲಿ ವ್ಯಕ್ತವಾಗಿದೆ. ಹಲವು ಜನ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಇದು ಇದೇ ಮೊದಲಿನ ಘಟನೆ ಅಲ್ಲ. ಈ ಹಿಂದೆ ಹಲವೆಡೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಚಗೊಳಿಸಿರುವ ಘಟನೆಗಳು ನಡೆದಿವೆ. ಈ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಪ್ರಭಾವ ಮತ್ತು ಮುಂದಿನ ಕ್ರಮ

ಈ ಘಟನೆ ರಾಜ್ಯದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತಿದೆ. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಪಿಟಿ ಟೀಚರ್ ವಿರುದ್ಧ ವಜಾ ಕ್ರಮ ಕೈಗೊಳ್ಳಬೇಕೆಂದು ಬೇಡಿಕೆ ಮುಂದುವರೆದಿದೆ. ಶಿಕ್ಷಣ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಹಕ್ಕುಗಳ ಉಲ್ಲಂಘನೆ ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago