ಯಾದಗಿರಿ ಜಿಲ್ಲೆಯ ಅರಕೇರ ಗ್ರಾಮದಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಕಸ್ತೂರಿಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ತೊಳೆುತ್ತಿರುವ ಘಟನೆ ಕೂಡಲೇ ವೈರಲ್ ಆಗಿದೆ. ವಿಡಿಯೋದಲ್ಲಿದ್ದ ದೃಶ್ಯಗಳಲ್ಲಿ ಮಕ್ಕಳು ಪೊರಕೆ, ಬಕೆಟ್ ಹಿಡಿದು ಶೌಚಾಲಯ ಶುದ್ಧಪಡಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬಂದಿದೆ.
ಈ ದೃಶ್ಯವೈರಲ್ ಆಗುತ್ತಿದ್ದಂತೆ ಪೋಷಕರಲ್ಲಿ ಆಕ್ರೋಶ ಜ್ವಾಲೆಯಾಗಿ ಭುಗಿಲೆದ್ದಿದ್ದು, ಶಾಲೆಗೆ ಭೇಟಿ ನೀಡಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಬೇಕಾಗಿರುವಾಗ, ಅವರಿಗೆ ಶೌಚಾಲಯ ತೊಳೆಯುವ ಕೆಲಸ ಕೊಡುವುದು ಸರ್ವಥಾ ನಿರ್ಲಕ್ಷ್ಯ ಮತ್ತು ಮಾನವೀಯತೆಯ ವಿರೋಧಿ ಎಂತೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕಿಂತ ಮುಂಚೆಯೂ ರಾಜ್ಯದ ಹಲವೆಡೆ ಶಾಲಾ ಮಕ್ಕಳಿಂದ ಶೌಚಾಲಯ ತೊಳೆಯುವಂತಹ ದುರ್ಘಟನೆಗಳು ವರದಿಯಾಗಿದ್ದವು. ಅದನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರವು ಶಿಕ್ಷಣ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆದರೂ ಈ ರೀತಿಯ ಘಟನೆಗಳು ಮತ್ತೆ ನಡೆಯುತ್ತಿರುವುದು ಶಾಲಾ ಆಡಳಿತದ ನಿರ್ಲಕ್ಷ್ಯವನ್ನು ಬಯಲುಮಾಡುತ್ತಿದೆ.
ಈ ಸಂಬಂಧ ಸ್ಥಳೀಯ ಅಧಿಕಾರಿಗಳು ತನಿಖೆಗೆ ಚಾಲನೆ ನೀಡಿದ್ದು, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವ ಈ ರೀತಿಯ ಘಟನೆಗಳು ಮತ್ತೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಜನರ ಒತ್ತಾಯ ಹೆಚ್ಚುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…