Latest

ಚಿಟಗುಪ್ಪ ಶಿರಸ್ತೇದಾರ್ ಅಪಹರಣ-ಹಲ್ಲೆ ಪ್ರಕರಣ: ತಹಶೀಲ್ದಾರ್ ಜಯಶ್ರೀ ಪತಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಚಿಟಗುಪ್ಪ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಸುಭಾಷ್ ಚಂದ್ರ ಅವರ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಜಯಶ್ರೀ, ಅವರ ಪತಿ ಶಾರಧಕ್ ಹಾಗೂ ಇನ್ನೂ ಮೂವರು ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಮೇ 16ರಂದು ಸುಭಾಷ್ ಚಂದ್ರ ಅವರು ಕೆಲಸ ಮುಗಿಸಿ ಬಸ್ ಮೂಲಕ ತಮ್ಮ ಸ್ವಗ್ರಾಮ ಸುಲೆಪೇಟೆ (ಚಿಂಚೋಳಿ ತಾಲ್ಲೂಕು, ಕಲಬುರಗಿ ಜಿಲ್ಲೆ) ಕಡೆಗೆ ತೆರಳುತ್ತಿದ್ದರು. ಈ ವೇಳೆ ಕುಡಂಬಲ್ ಗ್ರಾಮದ ಪೆಟ್ರೋಲ್ ಬಂಕ್ ಹತ್ತಿರ ಜಯಶ್ರೀ ಅವರ ಪತಿ ಹಾಗೂ ಮತ್ತಷ್ಟು ವ್ಯಕ್ತಿಗಳು ಬಸ್‌ಗೆ ಕಾರು ಅಡ್ಡಹಾಕಿ ಸುಭಾಷ್ ಚಂದ್ರರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಅನಂತರ ಅವರನ್ನು ಹತ್ತಿರದ ಡಾಬಾ ಪಕ್ಕದ ಖಾಲಿ ಕೋಣೆಯೊಂದರಲ್ಲಿ ಕರೆದೊಯ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾದ್ದಾರೆ ಎಂದು ಸುಭಾಷ್ ಚಂದ್ರ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಹಿಂದಿರುವ ಕಾರಣ ಎಂದು ಶಂಕಿಸಲಾಗುತ್ತಿರುವುದೇನಂದರೆ, ತಹಶೀಲ್ದಾರ್ ಕಚೇರಿಯಲ್ಲಿ ಜಯಶ್ರೀ ಮತ್ತು ಸುಭಾಷ್ ಚಂದ್ರರ ನಡುವೆ ಕಾರ್ಯನಿಮಿತ್ತವಾಗಿ ಕೆಲವು ದಿನಗಳಿಂದ ಬಿಕ್ಕಟ್ಟು ನಡೆದುಬರುತ್ತಿತ್ತು.

ಈ ಘಟನೆಯ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ವಿರುದ್ಧ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಸರ್ಕಾರಿ ಅಧಿಕಾರಿಗಳ ನಡುವಿನ ವೈಯಕ್ತಿಕ ದ್ವೇಷ ಈ ಮಟ್ಟದ ಗಂಭೀರ ಘಟನೆಯಾಗಿ ಬೆಳೆಯುವುದು ಬೇಸರವೀಗಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago