ಚಿಟಗುಪ್ಪ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಸುಭಾಷ್ ಚಂದ್ರ ಅವರ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಜಯಶ್ರೀ, ಅವರ ಪತಿ ಶಾರಧಕ್ ಹಾಗೂ ಇನ್ನೂ ಮೂವರು ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೇ 16ರಂದು ಸುಭಾಷ್ ಚಂದ್ರ ಅವರು ಕೆಲಸ ಮುಗಿಸಿ ಬಸ್ ಮೂಲಕ ತಮ್ಮ ಸ್ವಗ್ರಾಮ ಸುಲೆಪೇಟೆ (ಚಿಂಚೋಳಿ ತಾಲ್ಲೂಕು, ಕಲಬುರಗಿ ಜಿಲ್ಲೆ) ಕಡೆಗೆ ತೆರಳುತ್ತಿದ್ದರು. ಈ ವೇಳೆ ಕುಡಂಬಲ್ ಗ್ರಾಮದ ಪೆಟ್ರೋಲ್ ಬಂಕ್ ಹತ್ತಿರ ಜಯಶ್ರೀ ಅವರ ಪತಿ ಹಾಗೂ ಮತ್ತಷ್ಟು ವ್ಯಕ್ತಿಗಳು ಬಸ್ಗೆ ಕಾರು ಅಡ್ಡಹಾಕಿ ಸುಭಾಷ್ ಚಂದ್ರರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.
ಅನಂತರ ಅವರನ್ನು ಹತ್ತಿರದ ಡಾಬಾ ಪಕ್ಕದ ಖಾಲಿ ಕೋಣೆಯೊಂದರಲ್ಲಿ ಕರೆದೊಯ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾದ್ದಾರೆ ಎಂದು ಸುಭಾಷ್ ಚಂದ್ರ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ಹಿಂದಿರುವ ಕಾರಣ ಎಂದು ಶಂಕಿಸಲಾಗುತ್ತಿರುವುದೇನಂದರೆ, ತಹಶೀಲ್ದಾರ್ ಕಚೇರಿಯಲ್ಲಿ ಜಯಶ್ರೀ ಮತ್ತು ಸುಭಾಷ್ ಚಂದ್ರರ ನಡುವೆ ಕಾರ್ಯನಿಮಿತ್ತವಾಗಿ ಕೆಲವು ದಿನಗಳಿಂದ ಬಿಕ್ಕಟ್ಟು ನಡೆದುಬರುತ್ತಿತ್ತು.
ಈ ಘಟನೆಯ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ವಿರುದ್ಧ ಸಂಬಂಧಿತ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಸರ್ಕಾರಿ ಅಧಿಕಾರಿಗಳ ನಡುವಿನ ವೈಯಕ್ತಿಕ ದ್ವೇಷ ಈ ಮಟ್ಟದ ಗಂಭೀರ ಘಟನೆಯಾಗಿ ಬೆಳೆಯುವುದು ಬೇಸರವೀಗಿಸಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…