ಚಿತ್ರದುರ್ಗ, ಫೆಬ್ರವರಿ 17: ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಭರ್ಜರಿ ಕಾರ್ಯಾಚರಣೆ ನಡೆಸಿದ ಚಿತ್ರದುರ್ಗ ಸಿಇಎನ್ (ಸೈಬರ್, ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಮ್) ಪೊಲೀಸರು ಮೂವರು ಆನ್ಲೈನ್ ವಂಚಕರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉಡುಪಿಯ ಪ್ರಥ್ವೇಶ್ (25), ಚಿಕ್ಕಮಗಳೂರು ಜಿಲ್ಲೆಯ ನಂದೀಶ (24) ಮತ್ತು ಬೆಂಗಳೂರಿನ ಉಮರ್ ಫಾರೂಕ್ (24) ಎಂದು ಗುರುತಿಸಲಾಗಿದೆ. ಅವರಿಂದ ಮೂರು ಮೊಬೈಲ್ ಫೋನ್ಗಳು ಹಾಗೂ ವಂಚಿತ ಹಣದಿಂದ ಖರೀದಿಸಲಾದ ₹4.5 ಲಕ್ಷ ಮೌಲ್ಯದ ಮಹೀಂದ್ರ XUV 700 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ:
ಆರೋಪಿಗಳು “K3-Gold Stock Investor Discussion Group” ಎಂಬ WhatsApp ಗುಂಪಿನ ಮೂಲಕ Fyers ಶೇರು ಮಾರುಕಟ್ಟೆ ಪ್ಲಾಟ್ಫಾರ್ಮ್ ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವಾಗುತ್ತದೆ ಎಂದು ಆಮಿಷ ಒಡ್ಡಿ, ಚಿತ್ರದುರ್ಗ ನಿವಾಸಿ ಸೈಯದ್ ಸಿರಾಜ್ ಬಂಡಿ ಅವರಿಂದ ₹34 ಲಕ್ಷ ಹಣವನ್ನು ವಂಚಿಸಿದ್ದಾರೆ.
ಆರೋಪಿಗಳು ಶೇರು ಹೂಡಿಕೆ ಹೆಸರಿನಲ್ಲಿ ಮೋಸ ಮಾಡಿರುವ ಬಗ್ಗೆ ಸೈಯದ್ ಸಿರಾಜ್ ಬಂಡಿ 2023ರ ನವೆಂಬರ್ 23 ರಂದು ಚಿತ್ರದುರ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರು ನಡೆಸಿದ ಕಾರ್ಯಾಚರಣೆ:
ದೂರು ಸ್ವೀಕರಿಸಿದ ನಂತರ, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಬಂಡಾರು (IPS) ಹಾಗೂ ಸಿಇಎನ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಯಿತು.
ಪೊಲೀಸ್ ನಿರೀಕ್ಷಕ: ವೆಂಕಟೇಶ್.ಎನ್
ASI: ಅಂಜನಪ್ಪ
Head Constables: ಕೆಂಚಪ್ಪ, ಗಂಗಾಧರಪ್ಪ
CPC: ಗಗನ್ ದೀಪ್
ವೈಜ್ಞಾನಿಕ ತನಿಖೆ ಹಾಗೂ ಹಣದ ಹರಿವಿನ ಪರಿವೀಕ್ಷಣೆಯ ಮೂಲಕ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುನ್ನಡೆ ನೀಡಲಾಯಿತು. ಕೊನೆಗೂ, ವಿಶೇಷ ತಂಡ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.
ಸೈಬರ್ ಕ್ರೈಮ್ ವಿಭಾಗದ ಆಶಾ, ಹರ್ಷವರ್ಧನ್ ಹಾಗೂ ಲೋಕೇಶ್ ಎಂಬುವವರು ತಾಂತ್ರಿಕ ವಿಶ್ಲೇಷಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಅವರ ಶ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.
ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…