Latest

ಚಿತ್ರದುರ್ಗದಲ್ಲಿ ಆನ್ಲೈನ್ ಹೂಡಿಕೆ ಹೆಸರಿನಲ್ಲಿ ₹34 ಲಕ್ಷ ವಂಚನೆ: ಮೂವರು ಆರೋಪಿಗಳ ಅರೆಸ್ಟ್

ಚಿತ್ರದುರ್ಗ, ಫೆಬ್ರವರಿ 17: ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಭರ್ಜರಿ ಕಾರ್ಯಾಚರಣೆ ನಡೆಸಿದ ಚಿತ್ರದುರ್ಗ ಸಿಇಎನ್ (ಸೈಬರ್, ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಮ್) ಪೊಲೀಸರು ಮೂವರು ಆನ್ಲೈನ್ ವಂಚಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿಯ ಪ್ರಥ್ವೇಶ್ (25), ಚಿಕ್ಕಮಗಳೂರು ಜಿಲ್ಲೆಯ ನಂದೀಶ (24) ಮತ್ತು ಬೆಂಗಳೂರಿನ ಉಮರ್ ಫಾರೂಕ್ (24) ಎಂದು ಗುರುತಿಸಲಾಗಿದೆ. ಅವರಿಂದ ಮೂರು ಮೊಬೈಲ್‌ ಫೋನ್‌ಗಳು ಹಾಗೂ ವಂಚಿತ ಹಣದಿಂದ ಖರೀದಿಸಲಾದ ₹4.5 ಲಕ್ಷ ಮೌಲ್ಯದ ಮಹೀಂದ್ರ XUV 700 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ವಿವರ:

ಆರೋಪಿಗಳು “K3-Gold Stock Investor Discussion Group” ಎಂಬ WhatsApp ಗುಂಪಿನ ಮೂಲಕ Fyers ಶೇರು ಮಾರುಕಟ್ಟೆ ಪ್ಲಾಟ್‌ಫಾರ್ಮ್ ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವಾಗುತ್ತದೆ ಎಂದು ಆಮಿಷ ಒಡ್ಡಿ, ಚಿತ್ರದುರ್ಗ ನಿವಾಸಿ ಸೈಯದ್ ಸಿರಾಜ್ ಬಂಡಿ ಅವರಿಂದ ₹34 ಲಕ್ಷ ಹಣವನ್ನು ವಂಚಿಸಿದ್ದಾರೆ.

ಆರೋಪಿಗಳು ಶೇರು ಹೂಡಿಕೆ ಹೆಸರಿನಲ್ಲಿ ಮೋಸ ಮಾಡಿರುವ ಬಗ್ಗೆ ಸೈಯದ್ ಸಿರಾಜ್ ಬಂಡಿ 2023ರ ನವೆಂಬರ್ 23 ರಂದು ಚಿತ್ರದುರ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ನಡೆಸಿದ ಕಾರ್ಯಾಚರಣೆ:

ದೂರು ಸ್ವೀಕರಿಸಿದ ನಂತರ, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಬಂಡಾರು (IPS) ಹಾಗೂ ಸಿಇಎನ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಯಿತು.

ಪೊಲೀಸ್ ನಿರೀಕ್ಷಕ: ವೆಂಕಟೇಶ್.ಎನ್

ASI: ಅಂಜನಪ್ಪ

Head Constables: ಕೆಂಚಪ್ಪ, ಗಂಗಾಧರಪ್ಪ

CPC: ಗಗನ್ ದೀಪ್

ವೈಜ್ಞಾನಿಕ ತನಿಖೆ ಹಾಗೂ ಹಣದ ಹರಿವಿನ ಪರಿವೀಕ್ಷಣೆಯ ಮೂಲಕ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುನ್ನಡೆ ನೀಡಲಾಯಿತು. ಕೊನೆಗೂ, ವಿಶೇಷ ತಂಡ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.

ಸೈಬರ್ ಕ್ರೈಮ್ ವಿಭಾಗದ ಆಶಾ, ಹರ್ಷವರ್ಧನ್ ಹಾಗೂ ಲೋಕೇಶ್ ಎಂಬುವವರು ತಾಂತ್ರಿಕ ವಿಶ್ಲೇಷಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಅವರ ಶ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.

ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

8 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

8 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

11 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

12 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

12 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

13 hours ago