ಬೆಂಗಳೂರು: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ಆಡುಗೋಡಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಪಶ್ಚಿಮ ಬಂಗಾಳದ ನಿವಾಸಿಗಳಾದ ಸುಮನ್ ಹಾಗೂ ಗುಲಾಲ್ ಸೇರಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಜನವರಿ 28ರಂದು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದ ಸುಮನ್ ಮತ್ತು ಗುಲಾಲ್ ಎಂಬವರಿಗೆ 500 ಮುಖಬೆಲೆಯ ಖೋಟಾ ನೋಟುಗಳ ಒಟ್ಟು ರೂ. 1.5 ಲಕ್ಷ ಮೊತ್ತ ಲಭಿಸಿದೆ. ನಗರಕ್ಕೆ ಬಂದ ನಂತರ, ಅವರು ಈ ಹಣವನ್ನು ಊರಿಗೆ ಕಳುಹಿಸಲು ನಿರ್ಧರಿಸಿದರು.
ಈ ನಡುವೆ, ಮೊತ್ತದಲ್ಲಿ ರೂ. 70,000 ಹಣವನ್ನು ಕುಮಾರ್ ಎಂಬಾತನಿಗೆ ನೀಡುವ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸೂಚಿಸಿದರು. ಆದರೆ, ಕುಮಾರ್ ಹಣ ಎಣಿಸುತ್ತಿದ್ದಾಗ, ನೋಟುಗಳ ಸೀರಿಯಲ್ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅನುಮಾನ ಗೂಡಿತು. ತಕ್ಷಣವೇ ಅವರು ನೋಟುಗಳ ಪರಿಶೀಲನೆ ನಡೆಸಿದಾಗ, ಅವು ಖೋಟಾ ಎಂದು ದೃಢಪಟ್ಟಿತು.
ಈ ಬಗ್ಗೆ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ, ಪೊಲೀಸರು ಮೂವರನ್ನೂ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…