ಲೋಕೋಪಯೋಗಿ ಇಲಾಖೆ (PWD) ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಎಂದು ಹೇಳಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ (ಇಇ) ವೆಂಕಟೇಶ್ ಗಲಗ ವಿರುದ್ಧ ₹3.48 ಕೋಟಿ ಅಕ್ರಮ ಹಣ ವರ್ಗಾವಣೆ ಸಂಬಂಧ ಗಂಭೀರ ಆರೋಪಗಳು ಕೇಳಿಬಂದಿವೆ.
ಮಸ್ಕಿ–ಲಿಂಗಸುಗೂರು ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳು ಹಾಗೂ ನಕಲಿ ಟೆಂಡರ್ ಸೃಷ್ಟಿಸಿ ₹3 ಕೋಟಿ 48 ಲಕ್ಷ ಹಣವನ್ನು ಅಕ್ರಮವಾಗಿ ಬಿಡುಗಡೆ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳನ್ನು ಇಇ ವೆಂಕಟೇಶ್ ಗಲಗ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.
ಮೂಲತಃ ಈ ರಸ್ತೆ ಕಾಮಗಾರಿಯ ಟೆಂಡರ್ ಅಮ್ಮಾಪುರ ಆ್ಯಂಡ್ ಕಂಪನಿಗೆ ಅಧಿಕೃತವಾಗಿ ಮಂಜೂರಾಗಿತ್ತು. ಆದರೆ, ಕಾಮಗಾರಿ ನಡೆಯುತ್ತಿದ್ದ ವೇಳೆ ಭೀಮಾಶಂಕರ ದೋರನಹಳ್ಳಿ ಎಂಬ ಹೆಸರಿನಲ್ಲಿ ಮತ್ತೊಂದು ನಕಲಿ ಟೆಂಡರ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.
ಈ ಪ್ರಕರಣದ ಕುರಿತು ರಾಜ್ಯಪಾಲರು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಲಾಗಿದ್ದು, ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.
ಬಿಹಾರದ ಒಂದು ಸಣ್ಣ ಹಳ್ಳಿಯಿಂದ ಆರಂಭವಾದ ಪ್ರಯಾಣ, ಇಂದು ದೇಶದ ಅತ್ಯುನ್ನತ ನಾಗರಿಕ ಸೇವೆಯಾದ ಐಎಎಸ್ ಹುದ್ದೆ ತಲುಪಿದೆ. ದೃಢ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕರ…
ತೆಲಂಗಾಣದಲ್ಲಿ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ಗರ್ಭದಲ್ಲಿರುವ ಮಗುವಿನ ಪಿತೃತ್ವವನ್ನು ಪ್ರಶ್ನಿಸಿ ಡಿಎನ್ಎ ಪರೀಕ್ಷೆ ಮಾಡಿಸಬೇಕೆಂದು ಪತಿ ಪಟ್ಟು ಹಿಡಿದ…
ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಕುಟುಂಬಗಳ ಮೇಲೆಯೇ ಪರಿಣಾಮ ಬೀರುತ್ತಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮೂರು ಮಕ್ಕಳ ತಾಯಿಯಾಗಿದ್ದ…
ಚಿಕ್ಕಬಳ್ಳಾಪುರ ಜಿಲ್ಲೆಯ ಯುವ ಫಿಜಿಯೋಥೆರಪಿ ವೈದ್ಯೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ. ಸುರಭಿ ಎಂಬ…
ಕಾರವಾರ: ಕಾರವಾರ ತಾಲೂಕಿನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ…