ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಜನರಿಂದ ಕೋಟಿಗಟ್ಟಲೆ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತಾವು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ (ಚೀಫ್ ಸೆಕ್ರಟರಿ) ಎಂದು ಹೇಳಿಕೊಂಡು, ಜನರನ್ನು ಸುಳ್ಳು ಭರವಸೆ ನೀಡಿ ಹಣ ಪಡೆದಿರುವ ಘಟನೆ ಕಳವಳ ಮೂಡಿಸಿದೆ.
ಆರೋಪಿತರ ದುಷ್ಟಯೋಜನೆ
ಮಂಡ್ಯದ ತಾವರೆಗೆರೆ ನಿವಾಸಿ ವೆಂಕಟೇಶ್ ಮತ್ತು ಶಿವರುದ್ರ ಎಂಬ ಇಬ್ಬರು ಆರೋಪಿ, ಸಾರ್ವಜನಿಕರಿಗೆ ಸರ್ಕಾರಿ ನೇಮಕಾತಿ ಆದೇಶಗಳ ನಕಲಿ ಪ್ರತಿಗಳು, ರಾಜ್ಯಪಾಲರ ಹಾಗೂ ಅಬಕಾರಿ ಸಚಿವರ ನಕಲಿ ಸಹಿಗಳೊಂದಿಗೆ ಭರವಸೆ ನೀಡುತ್ತಿದ್ದರು. ನಿರುದ್ಯೋಗಿ ಯುವಕರು ಮತ್ತು ಅವರ ಪೋಷಕರಿಗೆ “ನಿಮ್ಮ ಮಕ್ಕಳಿಗೆ ಖಾತ್ರಿ ಸರ್ಕಾರಿ ಕೆಲಸ ನೀಡಲಾಗುವುದು” ಎಂದು ಮೋಸ ಮಾಡುತ್ತಿದ್ದರು.
ಹಲವಾರು ಪೋಷಕರ ಬದುಕಿಗೆ ಹೊಡೆತ
ಸ್ವಪ್ನದ ಭವಿಷ್ಯಕ್ಕಾಗಿ ತಮ್ಮ ಸಂಗ್ರಹಿತ ಹಣ ನೀಡಿದ ಹಲವಾರು ಪೋಷಕರು ತೀವ್ರ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ದೂರಿದಾಗ, ಹಣ ವಾಪಸು ಕೊಡುವುದಿಲ ಬೆದರಿಕೆ ಹಾಕುವಂತೆಯೂ ವರದಿಯಾಗಿದೆ.
ಪೊಲೀಸರ ವಿರುದ್ಧ ಗಂಭೀರ ಆರೋಪ
ವಂಚಿತರಾದ ಕೆಲವು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದರೂ, ಆರೋಪಿತ ವೆಂಕಟೇಶ್ ಪೊಲೀಸರಿಗೆ ಲಂಚ ನೀಡಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಪೊಲೀಸರು ಎಫ್ಐಆರ್ ದಾಖಲು ಮಾಡದೇ, ಇದನ್ನು ಲಘುವಾಗಿ ತೆಗೆದುಕೊಳ್ಳುತ್ತಿರುವುದಾಗಿ ವಂಚಿತರು ಆರೋಪಿಸುತ್ತಿದ್ದಾರೆ.
ಈ ಪ್ರಕರಣ ಅನೇಕವರಿಗೆ ಜಾಗೃತಿಯನ್ನು ಮೂಡಿಸುವಂತೆ ಮಾಡಿದ್ದು, ಸರ್ಕಾರ ಮತ್ತು ಕಾನೂನು ಸಂಸ್ಥೆಗಳು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ವಂಚಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…