Latest

ನಾನು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಎಂದು ಹೇಳಿಕೊಂಡು, ಕೋಟಿ ಕೋಟಿ ವಂಚನೆ: ನಕಲಿ ಅಧಿಕಾರಿ ಗ್ಯಾಂಗ್ ಬಯಲಿಗೆ

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಜನರಿಂದ ಕೋಟಿಗಟ್ಟಲೆ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತಾವು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ (ಚೀಫ್ ಸೆಕ್ರಟರಿ) ಎಂದು ಹೇಳಿಕೊಂಡು, ಜನರನ್ನು ಸುಳ್ಳು ಭರವಸೆ ನೀಡಿ ಹಣ ಪಡೆದಿರುವ ಘಟನೆ ಕಳವಳ ಮೂಡಿಸಿದೆ.

ಆರೋಪಿತರ ದುಷ್ಟಯೋಜನೆ

ಮಂಡ್ಯದ ತಾವರೆಗೆರೆ ನಿವಾಸಿ ವೆಂಕಟೇಶ್ ಮತ್ತು ಶಿವರುದ್ರ ಎಂಬ ಇಬ್ಬರು ಆರೋಪಿ, ಸಾರ್ವಜನಿಕರಿಗೆ ಸರ್ಕಾರಿ ನೇಮಕಾತಿ ಆದೇಶಗಳ ನಕಲಿ ಪ್ರತಿಗಳು, ರಾಜ್ಯಪಾಲರ ಹಾಗೂ ಅಬಕಾರಿ ಸಚಿವರ ನಕಲಿ ಸಹಿಗಳೊಂದಿಗೆ ಭರವಸೆ ನೀಡುತ್ತಿದ್ದರು. ನಿರುದ್ಯೋಗಿ ಯುವಕರು ಮತ್ತು ಅವರ ಪೋಷಕರಿಗೆ “ನಿಮ್ಮ ಮಕ್ಕಳಿಗೆ ಖಾತ್ರಿ ಸರ್ಕಾರಿ ಕೆಲಸ ನೀಡಲಾಗುವುದು” ಎಂದು ಮೋಸ ಮಾಡುತ್ತಿದ್ದರು.

ಹಲವಾರು ಪೋಷಕರ ಬದುಕಿಗೆ ಹೊಡೆತ

ಸ್ವಪ್ನದ ಭವಿಷ್ಯಕ್ಕಾಗಿ ತಮ್ಮ ಸಂಗ್ರಹಿತ ಹಣ ನೀಡಿದ ಹಲವಾರು ಪೋಷಕರು ತೀವ್ರ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ದೂರಿದಾಗ, ಹಣ ವಾಪಸು ಕೊಡುವುದಿಲ ಬೆದರಿಕೆ ಹಾಕುವಂತೆಯೂ ವರದಿಯಾಗಿದೆ.

ಪೊಲೀಸರ ವಿರುದ್ಧ ಗಂಭೀರ ಆರೋಪ

ವಂಚಿತರಾದ ಕೆಲವು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದರೂ, ಆರೋಪಿತ ವೆಂಕಟೇಶ್ ಪೊಲೀಸರಿಗೆ ಲಂಚ ನೀಡಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಪೊಲೀಸರು ಎಫ್ಐಆರ್ ದಾಖಲು ಮಾಡದೇ, ಇದನ್ನು ಲಘುವಾಗಿ ತೆಗೆದುಕೊಳ್ಳುತ್ತಿರುವುದಾಗಿ ವಂಚಿತರು ಆರೋಪಿಸುತ್ತಿದ್ದಾರೆ.

ಈ ಪ್ರಕರಣ ಅನೇಕವರಿಗೆ ಜಾಗೃತಿಯನ್ನು ಮೂಡಿಸುವಂತೆ ಮಾಡಿದ್ದು, ಸರ್ಕಾರ ಮತ್ತು ಕಾನೂನು ಸಂಸ್ಥೆಗಳು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ವಂಚಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago