ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ನಡೆದ ಘಟನೆಯೊಂದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ತಮ್ಮ ಗುಂಪಿನೊಂದಿಗೆ ನಿಂತಿದ್ದರು. ಈ ವೇಳೆ, ಪಿಎಸ್ಐ ಗಾದಿಲಿಂಗಪ್ಪ ಸ್ಥಳಕ್ಕೆ ಆಗಮಿಸಿ ಅವರನ್ನು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದ ಪರಿಣಾಮ, ಹನುಮಂತೇಗೌಡ ಅವಾಚ್ಯ ಶಬ್ದ ಬಳಸಿದರೆಂದು ಹೇಳಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡ ಪಿಎಸ್ಐ, ಅವರ ಕಪಾಳಕ್ಕೆ ಬಾರಿಸಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಿಎಸ್ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ, ಹನುಮಂತೇಗೌಡ ಕೂಡಲೇ ಪೊಲೀಸರು ವಶಕ್ಕೆ ಪಡೆದರು. ಹನುಮಂತೇಗೌಡ, ತನ್ನ ಮೇಲೆ ಪೊಲೀಸರಿಂದಲೇ ಹಲ್ಲೆಯಾಗಿದೆ ಎಂದು ಪ್ರತ್ಯುತ್ತರ ಆರೋಪ ಮಾಡಿ, ಎದೆ ನೋವಿನ ದೂರು ನೀಡಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಹಿಂದಿನ ವಿವರ: ಪರಸ್ಪರ ಆರೋಪಗಳು
ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರ ಕಾರು ಚಾಲಕ ರಂಗಸ್ವಾಮಿ ಪ್ರಕಾರ, ಪಿಎಸ್ಐ ಗಾದಿಲಿಂಗಪ್ಪ ಅವರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಅವರು ಏಕವಚನದಲ್ಲಿ ಮಾತನಾಡಿದರೆಂದು ಆರೋಪಿಸಿದ್ದಾರೆ. ಹನುಮಂತೇಗೌಡ ಗೌರವಯುತವಾಗಿ ಮಾತನಾಡಲು ಕೇಳಿದರೂ, ಪಿಎಸ್ಐ ಅವಾಚ್ಯ ಶಬ್ದ ಬಳಸಿದರೆಂದು ಹೇಳಿದ್ದಾರೆ. ಈ ಸಂಬಂಧ ನೂಕಾಟ-ತಳ್ಳಾಟ ನಡೆದು, ನಂತರ ಪಿಎಸ್ಐ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿಯಿಂದ ಕಠಿಣ ಪ್ರತಿಕ್ರಿಯೆ
ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, “ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ. ಚಿತ್ರದುರ್ಗದಲ್ಲಿ ಪಿಎಸ್ಐ ಗಾದಿಲಿಂಗಪ್ಪ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ. ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ,” ಎಂದು ಹೇಳಿದ್ದಾರೆ.
ಅಲ್ಲದೇ, ಈ ಘಟನೆ ರಾಜಕಾರಣ ಪ್ರೇರಿತ ಎಂದು ಆರೋಪಿಸಿರುವ ಅವರು, ಪಿಎಸ್ಐ ಗಾದಿಲಿಂಗಪ್ಪ ಅವರನ್ನು ತಕ್ಷಣ ಅಮಾನತು ಮಾಡಬೇಕು, ಇಲ್ಲದಿದ್ದರೆ ಬಿಜೆಪಿ ಹೋರಾಟ ಆರಂಭಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…