Politics

ಚಿತ್ರದುರ್ಗದಲ್ಲಿ ಬಿಜೆಪಿ ಅಧ್ಯಕ್ಷ ಹಾಗೂ ಪಿಎಸ್‌ಐ ನಡುವೆ ಘರ್ಷಣೆ: ಇಬ್ಬರೂ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ನಡೆದ ಘಟನೆಯೊಂದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ತಮ್ಮ ಗುಂಪಿನೊಂದಿಗೆ ನಿಂತಿದ್ದರು. ಈ ವೇಳೆ, ಪಿಎಸ್‌ಐ ಗಾದಿಲಿಂಗಪ್ಪ ಸ್ಥಳಕ್ಕೆ ಆಗಮಿಸಿ ಅವರನ್ನು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದ ಪರಿಣಾಮ, ಹನುಮಂತೇಗೌಡ ಅವಾಚ್ಯ ಶಬ್ದ ಬಳಸಿದರೆಂದು ಹೇಳಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡ ಪಿಎಸ್‌ಐ, ಅವರ ಕಪಾಳಕ್ಕೆ ಬಾರಿಸಿರುವುದಾಗಿ ತಿಳಿದುಬಂದಿದೆ.

ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ, ಹನುಮಂತೇಗೌಡ ಕೂಡಲೇ ಪೊಲೀಸರು ವಶಕ್ಕೆ ಪಡೆದರು. ಹನುಮಂತೇಗೌಡ, ತನ್ನ ಮೇಲೆ ಪೊಲೀಸರಿಂದಲೇ ಹಲ್ಲೆಯಾಗಿದೆ ಎಂದು ಪ್ರತ್ಯುತ್ತರ ಆರೋಪ ಮಾಡಿ, ಎದೆ ನೋವಿನ ದೂರು ನೀಡಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ಹಿಂದಿನ ವಿವರ: ಪರಸ್ಪರ ಆರೋಪಗಳು

ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರ ಕಾರು ಚಾಲಕ ರಂಗಸ್ವಾಮಿ ಪ್ರಕಾರ, ಪಿಎಸ್‌ಐ ಗಾದಿಲಿಂಗಪ್ಪ ಅವರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಅವರು ಏಕವಚನದಲ್ಲಿ ಮಾತನಾಡಿದರೆಂದು ಆರೋಪಿಸಿದ್ದಾರೆ. ಹನುಮಂತೇಗೌಡ ಗೌರವಯುತವಾಗಿ ಮಾತನಾಡಲು ಕೇಳಿದರೂ, ಪಿಎಸ್‌ಐ ಅವಾಚ್ಯ ಶಬ್ದ ಬಳಸಿದರೆಂದು ಹೇಳಿದ್ದಾರೆ. ಈ ಸಂಬಂಧ ನೂಕಾಟ-ತಳ್ಳಾಟ ನಡೆದು, ನಂತರ ಪಿಎಸ್‌ಐ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯಿಂದ ಕಠಿಣ ಪ್ರತಿಕ್ರಿಯೆ

ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, “ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ. ಚಿತ್ರದುರ್ಗದಲ್ಲಿ ಪಿಎಸ್‌ಐ ಗಾದಿಲಿಂಗಪ್ಪ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಅವರ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ. ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ,” ಎಂದು ಹೇಳಿದ್ದಾರೆ.

ಅಲ್ಲದೇ, ಈ ಘಟನೆ ರಾಜಕಾರಣ ಪ್ರೇರಿತ ಎಂದು ಆರೋಪಿಸಿರುವ ಅವರು, ಪಿಎಸ್‌ಐ ಗಾದಿಲಿಂಗಪ್ಪ ಅವರನ್ನು ತಕ್ಷಣ ಅಮಾನತು ಮಾಡಬೇಕು, ಇಲ್ಲದಿದ್ದರೆ ಬಿಜೆಪಿ ಹೋರಾಟ ಆರಂಭಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago