Latest

ಅಂಬೇಡ್ಕರ್, ವಾಲ್ಮೀಕಿ ಪ್ರತಿಮೆ ನಿರ್ಮಿಸುವ ವಿಚಾರದ ಎರಡು ಗುಂಪುಗಳ ನಡುವೆ ಸಂಘರ್ಷ. ವಿಚಾರವಾಗಿ 144 ಸೆಕ್ಷನ್ ಜಾರಿ

ಗೌರಿಬಿದನೂರು : ತಾಲ್ಲೂಕಿನ ಹಂಪಸಂದ್ರ ಗ್ರಾಮದಲ್ಲಿ, ಸಿದ್ದಗಂಗಮ್ಮ ಎಂಬುವವರು ವಾಲ್ಮೀಕಿ ಸಮುದಾಯಕ್ಕೆ ಸೇರಿದ ಶನಿಮಹಾತ್ಮ ದೇವಸ್ಥಾನಕ್ಕೆ ದಾನ ನೀಡಿದ್ದ ಖಾಲಿ ನಿವೇಶನದಲ್ಲಿ ಪರಿಶಿಷ್ಟ ಜಾತಿಯವರು ರಾತ್ರೋರಾತ್ರಿ ಅಂಬೇಡ್ಕರ್ ಪುತ್ತಳಿ ಪ್ರತಿಷ್ಟಾಪನೆ ಮಾಡಿದ್ದಾರೆ, ಎಂದು ವಾಲ್ಮೀಕಿ ಸಮುದಾಯದವರು
ಭಾನುವಾರ ಬೆಳಗ್ಗೆ ಇದೇ ಅಂಬೇಡ್ಕರ್ ಪುತ್ತಳಿ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿಯ ಬಾವಚಿತ್ರವಿರುವ ನಾಮಫಲಕವನ್ನು ತಂದು ನಿಲ್ಲಿಸಿದ ಪರಿಣಾಮ, ಎರಡು ಗುಂಪುಗಳ ಮದ್ಯೆ ಘರ್ಷಣೆ ಉಂಟಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಅಂಬೇಡ್ಕರ್ ಪುತ್ತಳಿ ಅನಾವರಣ ಮಾಡಲು, ಮಹರ್ಷಿ ವಾಲ್ಮೀಕಿ ನಾಮಫಲಕ ಅಡ್ಡವಿರುವುದರಿಂದ ಅದನ್ನು ಅಂಬೇಡ್ಕರ್ ಪಕ್ಕದಲ್ಲಿ ನಿಲ್ಲಿಸಲು ಪರಿಶಿಷ್ಟ ಜಾತಿ ಮುಖಂಡರು ಮನವಿ ಮಾಡಿದರು, ಶನಿಮಹಾತ್ಮ ದೇವಸ್ಥಾನದ ಟ್ರಸ್ಟ್ ಗೆ ಧಾನವಾಗಿ ನೀಡಿರುವ ಜಾಗಗದಲ್ಲಿ ಅಂಬೇಡ್ಕರ್ ಪುತ್ತಳಿ ನಿರ್ಮಾಣ ಮಾಡಲಾಗಿದೆ, ಎಂದು ಪರಿಶಿಷ್ಟ ವರ್ಗದ ಜನಾಂಗದವರು ಪಟ್ಟು ಹಿಡಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ, ಆಗ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ ಮತ್ತು ಸಿಬ್ಬಂದಿ ಮಹರ್ಷಿ ವಾಲ್ಮೀಕಿ ನಾಮಫಲಕವನ್ನು, ಅಂಬೇಡ್ಕರ್ ಪುತ್ತಳಿಯ ಪಕ್ಕದಲ್ಲಿ ನಿಲ್ಲಿಸಿ, ಎರಡಕ್ಕೂ ಮಾಲಾರ್ಪಣೆ ಮಾಡಿದರು.

ವಾಲ್ಮೀಕಿ ಫಲಕ ಅಳವಡಿಕೆ

ಒಂದೆಡೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದರೆ ಇನ್ನೊಂದೆಡೆ ವಾಲ್ಮೀಕಿ ಸಮುದಾಯದವರು ಅದೇ ಜಾಗದಲ್ಲಿ ಭಾನುವಾರ ಬೆಳಗ್ಗೆ ವಾಲ್ಮೀಕಿ ನಾಮಫಲಕ ಅನಾವರಣಗೊಳಿಸಿದ್ದಾರೆ. ಇದು ಜಟಾಪಟಿಗೆ ಕಾರಣವಾಗಿದೆ.
ಅಂಬೇಡ್ಕರ್ ಅವರ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ದೇವಾಲಯದ ಆವರಣದ ಜಾಗವನ್ನು ಒತ್ತುವರಿ ಮಾಡಿಕೊಂಡು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಸರಿಯಲ್ಲ. ಗ್ರಾಮದಲ್ಲಿ ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಕೊನೆಗೆ ಕಲ್ಲು ತೂರಾಟ ನಡೆಸುವ ಹಂತಕ್ಕೆ ತಲುಪಿದೆ. ಎರಡೂ ಗುಂಪಿನ ಮಹಿಳೆಯರೂ ಕೂಡ ಸಂಘರ್ಷದಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿದೆ.

ವಿಷಯ ತಿಳಿಯುತ್ತಿದ್ದಂತೆಎಸ್ ಪಿ ಕುಶಾಲ್ ಚೌಕ್ಸೆ, ಡಿವೈಎಸ್ಪಿ, ಶಿವಕುಮಾರ್, ವೃತ ನಿರೀಕ್ಷಕ ಸತ್ಯನಾರಾಯಣ, ಸಶಸ್ತ್ರ ಮೀಸಲುಪಡೆಯೊಂದಿಗೆ ತೆರಳಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಎರಡೂ ಗುಂಪುಗಳ ಮುಖಂಡರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ, ಮಾತುಕತೆ ವಿಫಲವಾಗಿದೆ, ನಾಳೆ ಎರಡು ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈ ಗೊಳ್ಳುವುದಾಗಿ ಅಧಿಕಾರಿಗಳು ಮುಖಂಡರ ಮನವೊಲಿಸಿದ್ದಾರೆ.

ತಹಸೀಲ್ದಾರ್ ಭೇಟಿ

ತಹಸೀಲ್ದಾರ್ ಮಹೇಶ್ ಎಸ್.ಪತ್ರಿ ಸ್ಥಳಕ್ಕೆ ಭೇಟಿ ನೀಡಿ, ಜಾಗದ ದಾಖಲೆಗಳ ಪರಿಶೀಲನೆ ನಡೆಸಿದರು.
ರಾತ್ರಿ ಅಂಬೇಡ್ಕರ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಡಿ.ಜೆ ಗೆ ಅನುಮತಿ ನೀಡಬೇಕೆಂದು ಯುವಕರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ರೀತಿ ಅನುಮತಿ ನೀಡುವುದಿಲ್ಲ. ಸಿದ್ದಗಂಗಮ್ಮಗೆ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಈಗಾಗಲೆ ಆಕೆಗೆ ವಸತಿಯಿರುವ ಕಾರಣಕ್ಕೆ ಆ ಜಾಗವನ್ನು ಶನಿಮಹಾತ್ಮ ದೇವಾಲಯಕ್ಕೆ ಬಿಟ್ಟಕೊಟ್ಟಿದ್ದಾರೆ. ಈ ಬಗ್ಗೆ ಸೂಕ್ತವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈ ಗೊಳ್ಳಲಾಗುವುದು. ಎರಡೂ ಸಮುದಾಯಗಳು ಗ್ರಾಮದಲ್ಲಿ ಶಾಂತಿ ಕಾಪಾಡಬೇಕು. ಅಂಬೇಡ್ಕರ್ ಅವರ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದರು.
ಮೀಸಲು ಪಡೆ ನಿಯೋಜನೆ
ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಮನೆ ಮಾಡಿರುವ ಕಾರಣ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಥಳದಲ್ಲಿ ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ, 150 ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದು, 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡoತಿದೆ.

                                                                                                 ***
ಗ್ರಾಮದಲ್ಲಿ 3 ಎಕರೆ ಗುಂಡು ತೋಪಿನಲ್ಲಿ ಈ ಹಿಂದೆ ಗ್ರಾಮ ಪಂಚಾಯತಿಯಲ್ಲಿ 33 ಮನೆಗಳನ್ನು ನಿರ್ಮಿಸಿಕೊಳ್ಳಲು ಹಕ್ಕು ಪತ್ರಗಳನ್ನು ನೀಡಲಾಗಿತ್ತು. ಆ ಪೈಕಿ ಐದು ನಿವೇಶನಗಳಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳದೆ ಖಾಲಿ ಬಿಡಲಾಗಿತ್ತು. ಅದರಲ್ಲಿ ನಿವೇಶನದ ಹಕ್ಕು ಪತ್ರ ಪಡೆದಿದ್ದ ಸಿದ್ದಗಂಗಮ್ಮ ಎಂಬುವವರು ಗ್ರಾಮದಲ್ಲಿ ಶನಿಮಹಾತ್ಮ ಸ್ವಾಮಿ ದೇವಾಲಯದ ಟ್ರಸ್ಟ್ ಗೆ ದೇವಾಲಯ ನಿರ್ಮಾಣ ಮಾಡಲು ತಮಗೆ ಮಂಜೂರಾಗಿದ್ದ ನಿವೇಶನದ ಜಾಗವನ್ನು ದಾನವಾಗಿ ಉಯಿಲು ಬರೆದು ಕೊಟ್ಟಿದ್ದಾರೆ. ಈ ಖಾಲಿ ನಿವೇಶನದಲ್ಲಿ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.
ತಹಶೀಲ್ದಾರ್ ಮಹೇಶ್ ಎಸ್ ಪತ್ರಿ.

ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಕಾರಣ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ. ಒಂದು ಕೆ ಎಸ್ ಆರ್ ಪಿ ತುಕಡಿ, 150 ಪೊಲೀಸ್ ಸಿಬ್ಬಂದಿ,
ಡಿ ವೈ ಎಸ್ ಪಿ, ವೃತ್ತ ನಿರೀಕ್ಷಕ, 3 ಪಿ ಎಸ್ ಐ ಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಎಸ್ ಪಿ ಕುಶಾಲ್ ಚೌಕ್ಸೆ ಎಚ್ಚರಿಕೆ ನೀಡಿದ್ದಾರೆ. ವರದಿ: ಅವಿನಾಶ್ 

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago