ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಆರನೇ ತರಗತಿಯ ವಿದ್ಯಾರ್ಥಿಯೊಬ್ಬ ವಾರ್ಡನ್ನ ಕ್ರೌರ್ಯಕ್ಕೆ ಒಳಗಾದ ಘಟನೆ ಬೆಳಕಿಗೆ ಬಂದಿದೆ.
ಅನಂತಪುರ ಗ್ರಾಮಕ್ಕೆ ಸೇರಿದ ಈ ಬಾಲಕನು ತಾನಿದ್ದ ವಸತಿ ನಿಲಯದಲ್ಲಿ ಸಹಪಾಠಿಗಳ ಜೊತೆ ತಮಾಷೆ ಮಾಡುತ್ತಿದ್ದ. ಅತಿಥಿ ವಿದ್ಯಾರ್ಥಿಗಳನ್ನು “ವಸತಿ ನಿಲಯದಲ್ಲಿ ದೆವ್ವ ಇದೆ” ಎಂದು ಹೆದರಿಸಿದ್ದ ಎನ್ನಲಾಗಿದ್ದು, ಈ ವಿಷಯವನ್ನು ಇತರ ವಿದ್ಯಾರ್ಥಿಗಳು ವಾರ್ಡನ್ಗೆ ತಿಳಿಸಿದ್ದಾರೆ.
ವಿಷಯ ತಿಳಿದ ವಾರ್ಡನ್ ಆತನ ಮೇಲೆ ಕೋಪಗೊಂಡು ಮಾನವೀಯತೆ ಮರೆತು ಬೆಲ್ಟ್ ಹಾಗೂ ಕೋಲಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಈ ಹಲ್ಲೆ ಪರಿಣಾಮ ವಿದ್ಯಾರ್ಥಿಯ ದೇಹದಾದ್ಯಂತ ಗಾಯಗಳಾಗಿದ್ದು, ಶರೀರದಲ್ಲಿ ಬಾಸುಂಡೆಗಳು ಉಂಟಾಗಿದ್ದು, ಕೆಲವು ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ.
ಈ ಘಟನೆಗೆ ಸಂಬಂಧಿಸಿದ ಮಾಹಿತಿ ಮೇಲಧಿಕಾರಿಗಳಿಗೆ ತಲುಪಿದ್ದು, ತಕ್ಷಣ ವಾರ್ಡನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಜರುಗಲಿದೆ. ವಿದ್ಯಾರ್ಥಿಯ ಸ್ಥಿತಿಯನ್ನು ವೈದ್ಯಕೀಯ ವರದಿ ಆಧರಿಸಿ ಹೆಚ್ಚಿನ ತನಿಖೆ ನಡೆಸಲು ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…