ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಆರನೇ ತರಗತಿಯ ವಿದ್ಯಾರ್ಥಿಯೊಬ್ಬ ವಾರ್ಡನ್ನ ಕ್ರೌರ್ಯಕ್ಕೆ ಒಳಗಾದ ಘಟನೆ ಬೆಳಕಿಗೆ ಬಂದಿದೆ.
ಅನಂತಪುರ ಗ್ರಾಮಕ್ಕೆ ಸೇರಿದ ಈ ಬಾಲಕನು ತಾನಿದ್ದ ವಸತಿ ನಿಲಯದಲ್ಲಿ ಸಹಪಾಠಿಗಳ ಜೊತೆ ತಮಾಷೆ ಮಾಡುತ್ತಿದ್ದ. ಅತಿಥಿ ವಿದ್ಯಾರ್ಥಿಗಳನ್ನು “ವಸತಿ ನಿಲಯದಲ್ಲಿ ದೆವ್ವ ಇದೆ” ಎಂದು ಹೆದರಿಸಿದ್ದ ಎನ್ನಲಾಗಿದ್ದು, ಈ ವಿಷಯವನ್ನು ಇತರ ವಿದ್ಯಾರ್ಥಿಗಳು ವಾರ್ಡನ್ಗೆ ತಿಳಿಸಿದ್ದಾರೆ.
ವಿಷಯ ತಿಳಿದ ವಾರ್ಡನ್ ಆತನ ಮೇಲೆ ಕೋಪಗೊಂಡು ಮಾನವೀಯತೆ ಮರೆತು ಬೆಲ್ಟ್ ಹಾಗೂ ಕೋಲಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಈ ಹಲ್ಲೆ ಪರಿಣಾಮ ವಿದ್ಯಾರ್ಥಿಯ ದೇಹದಾದ್ಯಂತ ಗಾಯಗಳಾಗಿದ್ದು, ಶರೀರದಲ್ಲಿ ಬಾಸುಂಡೆಗಳು ಉಂಟಾಗಿದ್ದು, ಕೆಲವು ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ.
ಈ ಘಟನೆಗೆ ಸಂಬಂಧಿಸಿದ ಮಾಹಿತಿ ಮೇಲಧಿಕಾರಿಗಳಿಗೆ ತಲುಪಿದ್ದು, ತಕ್ಷಣ ವಾರ್ಡನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಜರುಗಲಿದೆ. ವಿದ್ಯಾರ್ಥಿಯ ಸ್ಥಿತಿಯನ್ನು ವೈದ್ಯಕೀಯ ವರದಿ ಆಧರಿಸಿ ಹೆಚ್ಚಿನ ತನಿಖೆ ನಡೆಸಲು ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…