Crime

ಡಿಗ್ರಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಕ್ಲರ್ಕ್ ಭೀಮರಾಜ್ ಬಂಧನ.

ಚಿಕ್ಕಬಳ್ಳಾಪುರ, ಜುಲೈ 07: ಸ್ಪರ್ಧಾತ್ಮಕ ಪರೀಕ್ಷೆಗೆ ಮಾರ್ಗದರ್ಶನ ನೀಡುವ ನೆಪದಲ್ಲಿ ಡಿಗ್ರಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ ಹೀನಕೃತ್ಯಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಕ್ಲರ್ಕ್ ಭೀಮರಾಜ್ ಬಿ ಎಂಬುವವನು ಪೊಲೀಸರ ಹಸ್ತಕ್ಕೆ ಗಿರಿಯಾಗಿದ್ದಾನೆ.

ಬಿಎಸ್ಸಿ ಪದವಿ ಅಧ್ಯಯನ ಮಾಡುತ್ತಿರುವ ಈ ವಿದ್ಯಾರ್ಥಿನಿ, ಯುಪಿಎಸ್‌ಸಿ ಪರೀಕ್ಷೆ ಬರೆಯುವ ಕನಸು ಹೊಂದಿದ್ದಳು. ಈ ಪ್ರಯತ್ನದ ವೇಳೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಲಹೆ ಪಡೆಯುವ ಉದ್ದೇಶದಿಂದ ಕಾಲೇಜಿನ ಕ್ಲರ್ಕ್‌ ಭೀಮರಾಜ್‌ ಸಂಪರ್ಕಕ್ಕೆ ಬಂದಿದ್ದರು. ಆಗ ಭೀಮರಾಜ್, ತಾನು ಹಾಗೂ ತನ್ನ ಪತ್ನಿ ಇಬ್ಬರೂ ಈ ಪರೀಕ್ಷೆಗಳಲ್ಲಿ ಮಾರ್ಗದರ್ಶನ ನೀಡುತ್ತೇವೆ ಎಂದು ನಂಬಿಕೆ ಮೂಡಿಸಿ, ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಪರಿಣಾಮವಾಗಿ ಆಕೆ ಗರ್ಭವತಿಯಾಗಿದ್ದಾಳೆ ಎಂಬ ಆರೋಪ ಮುಂದಿಟ್ಟಲಾಗಿದೆ.

ಘಟನೆಯ ಬಳಿಕ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಭೀಮರಾಜ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ, ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾನೆ. ಪತ್ನಿಯು ಕೂಡ ಚಿಕ್ಕಬಳ್ಳಾಪುರದ ಸರಕಾರಿ ಕಚೇರಿಯೊಂದರಲ್ಲಿ ನೌಕರರಾಗಿದ್ದು, ಸಾಮಾಜಿಕವಾಗಿ ಒಬ್ಬ ಭದ್ರ ವ್ಯಕ್ತಿಯಂತೆ ಕಾಣಿಸಿಕೊಂಡಿದ್ದ ಭೀಮರಾಜ್, ಕಾಲೇಜಿನ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಕಪ್ಪು ತೊಟ್ಟಿದ್ದಾನೆ.

ಈ ನಡುವೆ, ದೂರು ನೀಡಿದ ವಿದ್ಯಾರ್ಥಿನಿಗೆ ಬೆದರಿಕೆ ಒಡಸಲಾಗುತ್ತಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಆರೋಪಿಯ ಪರವಾಗಿ ಕೆಲವು ವ್ಯಕ್ತಿಗಳು ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಡಿ ಅತ್ಯಾಚಾರ, ಜೀವ ಬೆದರಿಕೆ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಮುಂದುವರೆಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿನಿಯ ನ್ಯಾಯಕ್ಕಾಗಿ ವಿವಿಧ ವಲಯಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago