ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ಸಿನ ಮಹಿಳಾ ಕಂಡಕ್ಟರ್ ಚಾಣಕ್ಷತನದಿಂದ ನಾಲ್ವರು ಮಹಿಳೆಯರ ಕಳ್ಳರ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಈ ಘಟನೆ ಸೋಮವಾರ (ಮಾರ್ಚ್ 10) ಸಂಜೆ 7:15ರ ಸಮಯದಲ್ಲಿ ಮೆಜೆಸ್ಟಿಕ್ನಿಂದ ದೇವನಹಳ್ಳಿಯ ವಿಜಿಪುರಕ್ಕೆ ತೆರಳುತ್ತಿದ್ದ ಡಿಪೋ-50ಗೆ ಸೇರಿದ ಬಿಎಂಟಿಸಿ ಬಸ್ನಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಬಂದ ಈ ನಾಲ್ವರು ಮಹಿಳೆಯರು ಬಸ್ಸಿಗೆ ಹತ್ತಿದ ಬಳಿಕ, ಪಕ್ಕದ ಪ್ರಯಾಣಿಕರೊಬ್ಬರ ಬ್ಯಾಗ್ನಿಂದ ಒಬ್ಬ ಮಹಿಳಾ ಕಳ್ಳಿಯು ಮೊಬೈಲ್ ಕದಿಯಲು ಯತ್ನಿಸಿದರು. ಇದನ್ನು ಗಮನಿಸಿದ ಮಹಿಳಾ ಕಂಡಕ್ಟರ್ ಕೂಡಲೇ ಬಸ್ ಚಾಲಕ ಮುನಿರತ್ನ ಅವರಿಗೆ ಮಾಹಿತಿ ನೀಡಿದರು.
ಚಾಣಾಕ್ಷ ನಿರ್ಧಾರ ಮತ್ತು ಬಂಧನ
ಮಹಿಳಾ ಕಂಡಕ್ಟರ್ ಸಲಹೆಂತೆ, ಚಾಲಕ ಬಸ್ನ ಡೋರ್ ಲಾಕ್ ಮಾಡಿದ್ದು, ಪೊಲೀಸರು ಬರುವವರೆಗೆ ಬಸ್ನ್ನು ನಿಲ್ಲಿಸಿದರು. ಇದರಿಂದ ಪತ್ತೆಯಾಗುವುದಕ್ಕೆ ಭಯಗೊಂಡ ಕಳ್ಳಿಯರು ಮಗು ಅಳುತ್ತಿದೆ ಎಂಬ ನೆಪದಲ್ಲಿ ಬಸ್ ಬಿಟ್ಟು ಪರಾರಿಯಾಗಲು ಯತ್ನಿಸಿದರು. ಆದರೆ, ಚಾಲಕ ಮಂಜುನಾಥ್ ಡೋರ್ ತೆರೆಯದೆ ಎಚ್ಚರಿಕೆ ವಹಿಸಿದರು.
ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ, ಪರಿಶೀಲನೆಯ ವೇಳೆ ಕಳ್ಳಿಯರು ಕದ್ದ ಮೊಬೈಲ್ ಮತ್ತು ಮಾಂಗಲ್ಯ ಸರವನ್ನು ಸೀಟಿನ ಕೆಳಗೆ ಬಿಸಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅವರ ಬ್ಯಾಗ್ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಚಿನ್ನಾಭರಣ ಮತ್ತು ಹಲವಾರು ಮೊಬೈಲ್ಗಳು ಪತ್ತೆಯಾಗಿವೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…