Latest

ಚಾಣಕ್ಷ ಮಹಿಳಾ ಕಂಡಕ್ಟರ್: ಬಿಎಂಟಿಸಿ ಬಸ್ಸಿನಲ್ಲಿ ಕಳ್ಳಿಯರ ಗ್ಯಾಂಗ್ ಬಂಧನ

ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ಸಿನ ಮಹಿಳಾ ಕಂಡಕ್ಟರ್ ಚಾಣಕ್ಷತನದಿಂದ ನಾಲ್ವರು ಮಹಿಳೆಯರ ಕಳ್ಳರ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಈ ಘಟನೆ ಸೋಮವಾರ (ಮಾರ್ಚ್ 10) ಸಂಜೆ 7:15ರ ಸಮಯದಲ್ಲಿ ಮೆಜೆಸ್ಟಿಕ್‌ನಿಂದ ದೇವನಹಳ್ಳಿಯ ವಿಜಿಪುರಕ್ಕೆ ತೆರಳುತ್ತಿದ್ದ ಡಿಪೋ-50ಗೆ ಸೇರಿದ ಬಿಎಂಟಿಸಿ ಬಸ್‌ನಲ್ಲಿ ನಡೆದಿದೆ.

ಆಂಧ್ರಪ್ರದೇಶದಿಂದ ಬಂದ ಈ ನಾಲ್ವರು ಮಹಿಳೆಯರು ಬಸ್ಸಿಗೆ ಹತ್ತಿದ ಬಳಿಕ, ಪಕ್ಕದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಒಬ್ಬ ಮಹಿಳಾ ಕಳ್ಳಿಯು ಮೊಬೈಲ್ ಕದಿಯಲು ಯತ್ನಿಸಿದರು. ಇದನ್ನು ಗಮನಿಸಿದ ಮಹಿಳಾ ಕಂಡಕ್ಟರ್ ಕೂಡಲೇ ಬಸ್ ಚಾಲಕ ಮುನಿರತ್ನ ಅವರಿಗೆ ಮಾಹಿತಿ ನೀಡಿದರು.

ಚಾಣಾಕ್ಷ ನಿರ್ಧಾರ ಮತ್ತು ಬಂಧನ

ಮಹಿಳಾ ಕಂಡಕ್ಟರ್ ಸಲಹೆಂತೆ, ಚಾಲಕ ಬಸ್‌ನ ಡೋರ್ ಲಾಕ್ ಮಾಡಿದ್ದು, ಪೊಲೀಸರು ಬರುವವರೆಗೆ ಬಸ್‌ನ್ನು ನಿಲ್ಲಿಸಿದರು. ಇದರಿಂದ ಪತ್ತೆಯಾಗುವುದಕ್ಕೆ ಭಯಗೊಂಡ ಕಳ್ಳಿಯರು ಮಗು ಅಳುತ್ತಿದೆ ಎಂಬ ನೆಪದಲ್ಲಿ ಬಸ್ ಬಿಟ್ಟು ಪರಾರಿಯಾಗಲು ಯತ್ನಿಸಿದರು. ಆದರೆ, ಚಾಲಕ ಮಂಜುನಾಥ್ ಡೋರ್ ತೆರೆಯದೆ ಎಚ್ಚರಿಕೆ ವಹಿಸಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ, ಪರಿಶೀಲನೆಯ ವೇಳೆ ಕಳ್ಳಿಯರು ಕದ್ದ ಮೊಬೈಲ್ ಮತ್ತು ಮಾಂಗಲ್ಯ ಸರವನ್ನು ಸೀಟಿನ ಕೆಳಗೆ ಬಿಸಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅವರ ಬ್ಯಾಗ್‌ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಚಿನ್ನಾಭರಣ ಮತ್ತು ಹಲವಾರು ಮೊಬೈಲ್‌ಗಳು ಪತ್ತೆಯಾಗಿವೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

14 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

15 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

15 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

15 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

15 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago