ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ಸಿನ ಮಹಿಳಾ ಕಂಡಕ್ಟರ್ ಚಾಣಕ್ಷತನದಿಂದ ನಾಲ್ವರು ಮಹಿಳೆಯರ ಕಳ್ಳರ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಈ ಘಟನೆ ಸೋಮವಾರ (ಮಾರ್ಚ್ 10) ಸಂಜೆ 7:15ರ ಸಮಯದಲ್ಲಿ ಮೆಜೆಸ್ಟಿಕ್ನಿಂದ ದೇವನಹಳ್ಳಿಯ ವಿಜಿಪುರಕ್ಕೆ ತೆರಳುತ್ತಿದ್ದ ಡಿಪೋ-50ಗೆ ಸೇರಿದ ಬಿಎಂಟಿಸಿ ಬಸ್ನಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಬಂದ ಈ ನಾಲ್ವರು ಮಹಿಳೆಯರು ಬಸ್ಸಿಗೆ ಹತ್ತಿದ ಬಳಿಕ, ಪಕ್ಕದ ಪ್ರಯಾಣಿಕರೊಬ್ಬರ ಬ್ಯಾಗ್ನಿಂದ ಒಬ್ಬ ಮಹಿಳಾ ಕಳ್ಳಿಯು ಮೊಬೈಲ್ ಕದಿಯಲು ಯತ್ನಿಸಿದರು. ಇದನ್ನು ಗಮನಿಸಿದ ಮಹಿಳಾ ಕಂಡಕ್ಟರ್ ಕೂಡಲೇ ಬಸ್ ಚಾಲಕ ಮುನಿರತ್ನ ಅವರಿಗೆ ಮಾಹಿತಿ ನೀಡಿದರು.
ಚಾಣಾಕ್ಷ ನಿರ್ಧಾರ ಮತ್ತು ಬಂಧನ
ಮಹಿಳಾ ಕಂಡಕ್ಟರ್ ಸಲಹೆಂತೆ, ಚಾಲಕ ಬಸ್ನ ಡೋರ್ ಲಾಕ್ ಮಾಡಿದ್ದು, ಪೊಲೀಸರು ಬರುವವರೆಗೆ ಬಸ್ನ್ನು ನಿಲ್ಲಿಸಿದರು. ಇದರಿಂದ ಪತ್ತೆಯಾಗುವುದಕ್ಕೆ ಭಯಗೊಂಡ ಕಳ್ಳಿಯರು ಮಗು ಅಳುತ್ತಿದೆ ಎಂಬ ನೆಪದಲ್ಲಿ ಬಸ್ ಬಿಟ್ಟು ಪರಾರಿಯಾಗಲು ಯತ್ನಿಸಿದರು. ಆದರೆ, ಚಾಲಕ ಮಂಜುನಾಥ್ ಡೋರ್ ತೆರೆಯದೆ ಎಚ್ಚರಿಕೆ ವಹಿಸಿದರು.
ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ, ಪರಿಶೀಲನೆಯ ವೇಳೆ ಕಳ್ಳಿಯರು ಕದ್ದ ಮೊಬೈಲ್ ಮತ್ತು ಮಾಂಗಲ್ಯ ಸರವನ್ನು ಸೀಟಿನ ಕೆಳಗೆ ಬಿಸಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅವರ ಬ್ಯಾಗ್ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಚಿನ್ನಾಭರಣ ಮತ್ತು ಹಲವಾರು ಮೊಬೈಲ್ಗಳು ಪತ್ತೆಯಾಗಿವೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…