ಚಿಂಚೋಳಿ ತಾಲ್ಲೂಕಿನ ಕಸಬಾ ಹೋಬಳಿಗೆ ಸೇರಿದ ಮೈಲಾಂಡ್ಲಹಳ್ಳಿ ಗ್ರಾಮ ಕ್ರಾಸ್ನಲ್ಲಿ ದಾಖಲೆಗಳಿಲ್ಲದೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಕ್ಲಿನಿಕ್ನಲ್ಲಿ ಯಾವುದೇ ವೈದ್ಯಕೀಯ ಪರವಾನಗಿ ಇಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪರಿಶೀಲನೆಯಿಂದ ವೈದ್ಯೆ ರಮಾದೇವಿಯು ವೈದ್ಯಕೀಯ ವಿದ್ಯಾಭ್ಯಾಸದ ಪ್ರಮಾಣಪತ್ರ, ನೋಂದಣಿ ಹಾಗೂ ಕಾನೂನುಬದ್ಧ ಪರವಾನಗಿಯನ್ನು ಹೊಂದಿಲ್ಲವೆಂಬುದು ಬೆಳಕಿಗೆ ಬಂದಿದೆ.
ಕ್ಲಿನಿಕ್ನಲ್ಲಿ ಇಂಜೆಕ್ಷನ್, ಔಷಧಿ, ಚುಚ್ಚುಮದ್ದು ಹಾಗೂ ಹಲವಾರು ವೈದ್ಯಕೀಯ ಸಾಮಗ್ರಿಗಳನ್ನು ಸ್ಥಳದಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಬಳಿಕ ಕ್ಲಿನಿಕ್ಗೆ ಬೀಗ ಹಾಕಲಾಗಿದ್ದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ, ವೈದ್ಯೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸಾರ್ವಜನಿಕರ ಆರೋಗ್ಯದೊಂದಿಗೆ ಆಟವಾಡುವ ನಕಲಿ ಚಿಕಿತ್ಸಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…