ಮುಂಡಗೋಡ: ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಭಾರೀ ಅನಾಹುತವೊಂದು ಸಂಭವಿಸಿದೆ.ಹೌದು ಮುಡಸಾಲಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದು ನಿನ್ನೆ ತಡರಾತ್ರಿ ಕುಸಿದುಬಿದ್ದು ಭಾರಿ ಅನಾಹುತವೊಂದು ಸಂಭವಿಸಿದೆ ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಅಧಿಕಾರಿಗಳ ನಿರ್ಲಕ್ಷವೇ?
ಸರ್ಕಾರ ಈ ಮೊದಲೇ ತಿಳಿಸಿರುವಂತೆ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಪಾಠ ಬೋಧನೆ ಮಾಡದಂತೆ ಆದೇಶ ಹೊರಡಿಸಿದೆ .ಆದರೆ ಈ ಬಗ್ಗೆ ಶಾಲಾ ಮುಖ್ಯಾಧ್ಯಾಪಕರು ನಿರ್ಲಕ್ಷ್ಯ ವಹಿಸಿದರೆ ಎಂಬ ಅನುಮಾನ ಕಾಡುತ್ತಿದೆ. ಅಥವಾ ಸರ್ಕಾರದ ಆದೇಶ ಇವರಿಗೆ ತಿಳಿದೇ ಇಲ್ಲವೇ?ಏನೇ ಆಗಲಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದು ಯಾವ ನ್ಯಾಯ ?ಎಂದು ಗ್ರಾಮಸ್ಥರು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ .
ಬಿದ್ದ ಕೊಠಡಿಯಲ್ಲಿಯೇ 4 ಮತ್ತು5 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ನಡೆಯುತ್ತಿತ್ತಂತೆ.ಹೌದು ಮುಡಸಾಲಿ ಗ್ರಾಮದ ಶಾಲೆಯಲ್ಲಿ 103 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ನಾಲ್ಕು ಮತ್ತು ಐದನೇ ತರಗತಿಯ ಸುಮಾರು 30 ವಿದ್ಯಾರ್ಥಿಗಳು ಇದೇ ಶಿಥಿಲವಾದ ಕೊಠಡಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದರು ಎನ್ನಲಾಗಿದೆ.
ಇನ್ನಾದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಾಲೂಕಿನ ಎಲ್ಲ ಶಾಲೆಗಳಿಗೂ ಖುದ್ದು ಭೇಟಿನೀಡಿ ಇಂತಹ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನು ಗುರುತಿಸಿ ಪಾಠ ಬೋಧನೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕಾಗಿದೆ.
ವರದಿ :ಮಂಜುನಾಥ ಹರಿಜನ .
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…