ಮುಂಡಗೋಡ: ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಭಾರೀ ಅನಾಹುತವೊಂದು ಸಂಭವಿಸಿದೆ.ಹೌದು ಮುಡಸಾಲಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದು ನಿನ್ನೆ ತಡರಾತ್ರಿ ಕುಸಿದುಬಿದ್ದು ಭಾರಿ ಅನಾಹುತವೊಂದು ಸಂಭವಿಸಿದೆ ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಅಧಿಕಾರಿಗಳ ನಿರ್ಲಕ್ಷವೇ?
ಸರ್ಕಾರ ಈ ಮೊದಲೇ ತಿಳಿಸಿರುವಂತೆ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಪಾಠ ಬೋಧನೆ ಮಾಡದಂತೆ ಆದೇಶ ಹೊರಡಿಸಿದೆ .ಆದರೆ ಈ ಬಗ್ಗೆ ಶಾಲಾ ಮುಖ್ಯಾಧ್ಯಾಪಕರು ನಿರ್ಲಕ್ಷ್ಯ ವಹಿಸಿದರೆ ಎಂಬ ಅನುಮಾನ ಕಾಡುತ್ತಿದೆ. ಅಥವಾ ಸರ್ಕಾರದ ಆದೇಶ ಇವರಿಗೆ ತಿಳಿದೇ ಇಲ್ಲವೇ?ಏನೇ ಆಗಲಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದು ಯಾವ ನ್ಯಾಯ ?ಎಂದು ಗ್ರಾಮಸ್ಥರು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ .
ಬಿದ್ದ ಕೊಠಡಿಯಲ್ಲಿಯೇ 4 ಮತ್ತು5 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ನಡೆಯುತ್ತಿತ್ತಂತೆ.ಹೌದು ಮುಡಸಾಲಿ ಗ್ರಾಮದ ಶಾಲೆಯಲ್ಲಿ 103 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ನಾಲ್ಕು ಮತ್ತು ಐದನೇ ತರಗತಿಯ ಸುಮಾರು 30 ವಿದ್ಯಾರ್ಥಿಗಳು ಇದೇ ಶಿಥಿಲವಾದ ಕೊಠಡಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದರು ಎನ್ನಲಾಗಿದೆ.
ಇನ್ನಾದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಾಲೂಕಿನ ಎಲ್ಲ ಶಾಲೆಗಳಿಗೂ ಖುದ್ದು ಭೇಟಿನೀಡಿ ಇಂತಹ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನು ಗುರುತಿಸಿ ಪಾಠ ಬೋಧನೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕಾಗಿದೆ.
ವರದಿ :ಮಂಜುನಾಥ ಹರಿಜನ .
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…