Latest

Ragging ಭೀತಿಗೆ ಕಾಲೇಜ್ ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು ನಗರದಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, 22 ವರ್ಷದ ಅರ್ಚಿಟೆಕ್ಚರ್ ವಿದ್ಯಾರ್ಥಿ ಅರುಣ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೋಕ ಸಾದಗಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರ್ಯಾಗಿಂಗ್ ಭೀತಿಯಿಂದ ವಿದ್ಯಾರ್ಥಿ ಈ ಕೃತ್ಯ ಎಸಗಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಹಾಸನ ಜಿಲ್ಲೆ ಮೂಲದ ಚನ್ನಕೇಶವ ಮತ್ತು ತುಳಸಿ ದಂಪತಿಯ ಪುತ್ರನಾದ ಅರುಣ್, ಬೆಂಗಳೂರಿನ ಬಾಗಲೂರಿನ ಪ್ರತಿಷ್ಠಿತ ಆರ್ಕಿಟೆಕ್ಚರ್ ಕಾಲೇಜಿನಲ್ಲಿ ಉಚಿತ ಸೀಟ್‌ ಪಡೆಯುವ ಮೂಲಕ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸಿದ್ದ ಅರುಣ್, ತನ್ನ ಸಾಧನೆಗಾಗಿ ಕಾಲೇಜಿನಲ್ಲಿ ಟಾಪರ್‌ನಾಗಿದ್ದಾನೆ. ಕುಟುಂಬದ ಆರ್ಥಿಕ ಹಿನ್ನಲೆಯಲ್ಲಿ ಕೂಲಿ ಕೆಲಸ ಮಾಡುವ ಪೋಷಕರು ಮಗನ ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯಿಂದ ಸಹಕಾರ ನೀಡಿದ್ದರು.

ಜುಲೈ 10ರಂದು ಅರುಣ್ ತನ್ನ ಗೃಹಕ್ಕೆ ಬಂದು, ಜುಲೈ 11ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮೊದಲು, ತನ್ನ ಮೇಲೆ ನಡೆದಿದ್ದ ರ್ಯಾಗಿಂಗ್‌ ಕುರಿತು ವಿಡಿಯೋ ಸಂದೇಶವೊಂದನ್ನು ಸೆಲ್ಫಿಯಾಗಿ ಮಾಡಿದ್ದಾನೆ. ಈ ವಿಡಿಯೋ ನಂತರವೇ ಆತನ ಆತ್ಮಹತ್ಯೆ ಬೆಳಕಿಗೆ ಬಂದಿದೆ.

ಅರುಣ್ ಮಾಡಿದ ಸೆಲ್ಫಿ ವೀಡಿಯೋ, ಕಾಲೇಜಿನ ವಾಟ್ಸಾಪ್ ಗ್ರೂಪ್‌ನಲ್ಲಿ ವೈರಲ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೇ ಕಾಲೇಜು ಆಡಳಿತಮಂಡಳಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ರು. ಆದರೆ ಮನೆಗೆ ಪೋಷಕರು ಬಂದಾಗ, ಅರುಣ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆಯಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿದ್ಯಾರ್ಥಿಯ ಮರಣದಿಂದ ಕುಟುಂಬ ಹಾಗೂ ಶೈಕ್ಷಣಿಕ ವಲಯದಲ್ಲಿ ದುಗುಡ ಮೂಡಿದೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣವಾದವರು ಯಾರಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

15 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

15 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago