ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಲೋಕಾಯುಕ್ತ ಪೊಲೀಸರು ಹುಬ್ಬಳ್ಳಿಯಲ್ಲಿ ಮಿಂಚಿನ ದಾಳಿ ನಡೆಸಿ, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಡೆ ಅವರನ್ನು ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದ್ದಾರೆ.
ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ₹6 ಲಕ್ಷ ಲಂಚ ಪಡೆಯುವಾಗಲೇ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. 2019ರಲ್ಲಿ ಖರೀದಿಸಿದ್ದ ಎಂಟು ಟಿಪ್ಪರ್ ವಾಹನಗಳಿಗೆ ಸಂಬಂಧಿಸಿದಂತೆ ಸುಮಾರು ₹60 ಲಕ್ಷ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಲಭ್ಯವಾಗಿದ್ದು, ಅದರಲ್ಲಿಂದ ₹34 ಲಕ್ಷ ಪಡೆದಿದ್ದ ವಿಶ್ವಜಿತ್ ವಿರುದ್ಧ ಇಲಾಖೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.
ಈ ಪ್ರಕರಣದಲ್ಲಿ ಸಹಾಯ ಮಾಡುವ ನೆಪದಲ್ಲಿ ಭರತ್ ಕುಮಾರ್ ಹೆಗ್ಡೆ ಅವರು ಹಲವು ಬಾರಿ ವಿಚಾರಣೆಗೆ ಕರೆಯಿಸಿ, “ಪ್ರಕರಣ ಮುಚ್ಚಲು ಹಣ ತರಬೇಕು” ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ನಿರಾಕರಿಸಿದ ವಿಶ್ವಜಿತ್ ನಾಯಕ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ಆಧರಿಸಿ ರೂಪಿಸಿದ ಉರುಳಿಗೆ ತಕ್ಕಂತೆ, ಇಂದು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ತಂಡ ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದೆ. ಅವರಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ ದೇವರಾಜ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಮಲ್ಲಿಕಾರ್ಜುನ ಚುಕ್ಕಿ, ಪ್ರದೀಪ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ರಾಜು ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…