ಮಂಗಳೂರು: ಹಿಂದುತ್ವ ಬೆಂಬಲಿಗ ಪುನೀತ್ ಕೆರೆಹಳ್ಳಿ ಅವರ ವಿರುದ್ದ ಕೋಮು ಪ್ರಚೋದನೆಗೆ ಸಂಬಂಧಿಸಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 3ರ ರಾತ್ರಿ 8 ಗಂಟೆಯ ಸುಮಾರಿಗೆ ಉರ್ವ ಠಾಣೆಯಲ್ಲಿ ಸೋಶಿಯಲ್ ಮೀಡಿಯಾ ಮೇಲ್ವಿಚಾರಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಫೇಸ್ಬುಕ್ ವೀಕ್ಷಣೆ ನಡೆಸುತ್ತಿದ್ದ ವೇಳೆ ಪುನೀತ್ ಕೆರೆಹಳ್ಳಿ ಅವರ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ಒಂದು ರೀಲ್ಸ್ ಗಮನಕ್ಕೆ ಬಂದಿದೆ. ಅಲ್ಲಿ ಅವರು ನೀಡಿರುವ ಹೇಳಿಕೆಗಳು ಕೋಮು ಹಿನ್ನಲೆ ಹೊಂದಿದ್ದು, ಸಮಾಜದಲ್ಲಿ ಅಶಾಂತಿ ಹುಟ್ಟುಹಾಕುವ ರೀತಿಯಲ್ಲಿವೆ ಎಂಬ ಕಾರಣದಿಂದ ಪೊಲೀಸರು ದೂರು ದಾಖಲಿಸಿದ್ದಾರೆ.
ದೂರು ಪ್ರಕಾರ, ಪುನೀತ್ ಕೆರೆಹಳ್ಳಿ ಅವರು ಬೆಂಗಳೂರಿನ ಇಸ್ಲಾಂ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳನ್ನು ಉಲ್ಲೇಖಿಸಿ, ಅಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಅವರ ಹೇಳಿಕೆಯಲ್ಲಿ — “ಅವು ಮಿನಿ ಪಾಕಿಸ್ತಾನಗಳಾಗಿವೆ”, “ಅಲ್ಲಿಗೆ ಹೋಗಿ ಬರುವ ಪರಿಸ್ಥಿತಿಯೇ ಇಲ್ಲ”, “ಅವರು ಎಲ್ಲ ರೀತಿಯ ಕಾನೂನುಬಾಹಿರ ಕೆಲಸಗಳಲ್ಲಿ ತೊಡಗುತ್ತಾರೆ, ನಾವು ನಿಚ್ಚಳನಾಗಿ ನೋಡುತ್ತೇವೆ” ಎಂಬಂತ ಮಾತುಗಳು ಸ್ಥಾನ ಪಡೆದಿವೆ.
ಈ ರೀತಿಯ ಹೇಳಿಕೆಗಳು ಎರಡು ಸಮುದಾಯಗಳ ನಡುವಿನ ಬಾಂಧವ್ಯಕ್ಕೆ ಧಕ್ಕೆಯಾಗುವ ಸಂಭವವಿದ್ದು, ಶಾಂತಿ ಸುವ್ಯವಸ್ಥೆಗೆ ಗಂಬೀರ ಬೆದರಿಕೆ ಉಂಟುಮಾಡಬಹುದು ಎಂಬ ಅಂಶವನ್ನು ದೂರು ಸ್ಪಷ್ಟಪಡಿಸಿದೆ.
ಪ್ರಸ್ತುತ ಉರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ತೀವ್ರತೆಯನ್ನು ಪ್ರಚೋದಿಸುವ ಪ್ರಯತ್ನಗಳ ವಿರುದ್ಧ ಪೊಲೀಸ್ ಇಲಾಖೆ ಗಂಭೀರವಾಗಿ ನಿಗಾವಹಿಸುತ್ತಿರುವಂತಾಗಿದ್ದು, ಈ ಪ್ರಕರಣ ಕೂಡ ಹೆಚ್ಚಿದ ಎಚ್ಚರಿಕೆಗೆ ಕಾರಣವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…