Latest

ಕೋಮು ಪ್ರಚೋದನೆ ಆರೋಪ: ಪುನೀತ್ ಕೆರೆಹಳ್ಳಿಗೆ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್

ಮಂಗಳೂರು: ಹಿಂದುತ್ವ ಬೆಂಬಲಿಗ ಪುನೀತ್ ಕೆರೆಹಳ್ಳಿ ಅವರ ವಿರುದ್ದ ಕೋಮು ಪ್ರಚೋದನೆಗೆ ಸಂಬಂಧಿಸಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 3ರ ರಾತ್ರಿ 8 ಗಂಟೆಯ ಸುಮಾರಿಗೆ ಉರ್ವ ಠಾಣೆಯಲ್ಲಿ ಸೋಶಿಯಲ್ ಮೀಡಿಯಾ ಮೇಲ್ವಿಚಾರಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಫೇಸ್‌ಬುಕ್ ವೀಕ್ಷಣೆ ನಡೆಸುತ್ತಿದ್ದ ವೇಳೆ ಪುನೀತ್ ಕೆರೆಹಳ್ಳಿ ಅವರ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ಒಂದು ರೀಲ್ಸ್ ಗಮನಕ್ಕೆ ಬಂದಿದೆ. ಅಲ್ಲಿ ಅವರು ನೀಡಿರುವ ಹೇಳಿಕೆಗಳು ಕೋಮು ಹಿನ್ನಲೆ ಹೊಂದಿದ್ದು, ಸಮಾಜದಲ್ಲಿ ಅಶಾಂತಿ ಹುಟ್ಟುಹಾಕುವ ರೀತಿಯಲ್ಲಿವೆ ಎಂಬ ಕಾರಣದಿಂದ ಪೊಲೀಸರು ದೂರು ದಾಖಲಿಸಿದ್ದಾರೆ.

ದೂರು ಪ್ರಕಾರ, ಪುನೀತ್ ಕೆರೆಹಳ್ಳಿ ಅವರು ಬೆಂಗಳೂರಿನ ಇಸ್ಲಾಂ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳನ್ನು ಉಲ್ಲೇಖಿಸಿ, ಅಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಅವರ ಹೇಳಿಕೆಯಲ್ಲಿ — “ಅವು ಮಿನಿ ಪಾಕಿಸ್ತಾನಗಳಾಗಿವೆ”, “ಅಲ್ಲಿಗೆ ಹೋಗಿ ಬರುವ ಪರಿಸ್ಥಿತಿಯೇ ಇಲ್ಲ”, “ಅವರು ಎಲ್ಲ ರೀತಿಯ ಕಾನೂನುಬಾಹಿರ ಕೆಲಸಗಳಲ್ಲಿ ತೊಡಗುತ್ತಾರೆ, ನಾವು ನಿಚ್ಚಳನಾಗಿ ನೋಡುತ್ತೇವೆ” ಎಂಬಂತ ಮಾತುಗಳು ಸ್ಥಾನ ಪಡೆದಿವೆ.

ಈ ರೀತಿಯ ಹೇಳಿಕೆಗಳು ಎರಡು ಸಮುದಾಯಗಳ ನಡುವಿನ ಬಾಂಧವ್ಯಕ್ಕೆ ಧಕ್ಕೆಯಾಗುವ ಸಂಭವವಿದ್ದು, ಶಾಂತಿ ಸುವ್ಯವಸ್ಥೆಗೆ ಗಂಬೀರ ಬೆದರಿಕೆ ಉಂಟುಮಾಡಬಹುದು ಎಂಬ ಅಂಶವನ್ನು ದೂರು ಸ್ಪಷ್ಟಪಡಿಸಿದೆ.

ಪ್ರಸ್ತುತ ಉರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ತೀವ್ರತೆಯನ್ನು ಪ್ರಚೋದಿಸುವ ಪ್ರಯತ್ನಗಳ ವಿರುದ್ಧ ಪೊಲೀಸ್ ಇಲಾಖೆ ಗಂಭೀರವಾಗಿ ನಿಗಾವಹಿಸುತ್ತಿರುವಂತಾಗಿದ್ದು, ಈ ಪ್ರಕರಣ ಕೂಡ ಹೆಚ್ಚಿದ ಎಚ್ಚರಿಕೆಗೆ ಕಾರಣವಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago