Latest

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮಾಜ ಸೇವೆ: ಜಿಲ್ಲಾಧಿಕಾರಿ ಕೆ.ಎಮ್ ಜಾನಕಿ ಶ್ಲಾಘನೆ

ಬಾಗಲಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ‌.ಸಿ. ಟ್ರಸ್ಟ್ (ರಿ) ಬಾಗಲಕೊಟೆ ಇವರ ವತಿಯಿಂದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಜರುಗಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮಾತಾನಾಡಿದ ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಮ್ ರವರು ಸುಜ್ಞಾನನಿಧಿ ಶಿಷ್ಯವೇತನ ವಿದ್ಯಾರ್ಥಿಗಳ ಪಾಲಿಗೆ ಆಶಾ ಕಿರಣವಾಗಿದ್ದು, ಈ ಯೋಜನೆ ನೆರವಿನೊಂದಿಗೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನದಲ್ಲಿ ಉತ್ತಮ ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.
ನಂತರ 64 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ, ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪ ಕಟ್ಟಡಕ್ಕೆ ರೂ 2.50 ಲಕ್ಷ ಮಂಜೂರಾತಿ ಪತ್ರ, ಸಾಲ ಪಡೆದು ಮರಣ ಹೊಂದಿದ ನಾಮಿನಿಯವರಿಗೆ PRK ಕ್ಲೇಮ್ 4.12 ಲಕ್ಷ, 03 ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ನೀಡಿದರು.
ಮುಖ್ಯ ಅತಿಥಿಗಳಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಶ್ರೀ ಶಶಿಧರ ಕುರೇರ ರವರು ಮಾತನಾಡಿದರು.
ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಪ್ರಾದೇಶಿಕ ಕಚೇರಿ ಕೊಪ್ಪಳ ಶ್ರೀ ಚಂದ್ರಶೇಖರ್ ಜೆ ರವರು ಯೋಜನೆಯ ಕಾರ್ಯಕ್ರಮಗಳಲ್ಲಿ ಒಂದಾದ ಸುಜ್ಞಾನನಿಧಿ ಶಿಷ್ಯ ವೇತನದ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರ್ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜ್ ನವನಗರ ಬಾಗಲಕೋಟೆ, ಶ್ರೀ ಚನ್ನಕೇಶವ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಗೆ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಚೇರಿ ಬಾಗಲಕೋಟೆ, ಶ್ರೀರಂಗನಗೌಡ ದಂಡನ್ನವರ, ಶ್ರೀಮತಿ ರಾಜ್ಯಶ್ರೀ ಒಂದಕುದುರಿ ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ)ಬಾಗಲಕೋಟೆ, ಶ್ರೀ ನಾಗೇಶ್ ವೈ. ಎ ಜನಜಾಗೃತಿ ಯೋಜನಾಧಿಕಾರಿಗಳು ಪ್ರಾದೇಶಿಕಚೇರಿ ಕೊಪ್ಪಳ, ಶ್ರೀ ಬಸವರಾಜ್ ಅಂಗಡಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ವೃತ್ತಿಪರ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು. ಕಾರ್ಯಕ್ರದಲ್ಲಿ ಮೆಲ್ವಿಚಾರಕ ಗುರುನಾಥ ಸ್ವಾಗತಿಸಿದರು, ಕೃಷಿ ಮೆಲ್ವಿಚಾರಕ ದ್ಯಾಮಪ್ಪಾ ಗಾಳಿ ವಂದಿಸಿದರು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ರೇಣುಕಾ, ಸೇವಾಪ್ರತಿನಿಧಿಗಳು ಹಾಜರಿದ್ದರು.

ವರದಿ: ವಿಶ್ವನಾಥ ಭಜಂತ್ರಿ
ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago