Latest

ಎಸ್‌ಐಟಿ ಎದುರು ಹಾಜರಾದ ದೂರುದಾರ: ಶವ ಹೂತು ಪ್ರಕರಣದಲ್ಲಿ ಹೊಸ ತಿರುವು

ಮಂಗಳೂರು, ಜುಲೈ 26: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಭೂಮಿಗೆ ಹೂತು ಇಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಗೆ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ಆರಂಭಿಸಿದೆ.

ಜುಲೈ 25ರ ಸಂಜೆ ಎಸ್‌ಐಟಿ ತಂಡ ಧರ್ಮಸ್ಥಳ ಠಾಣೆಗೆ ದಿಢೀರ್‌ ಭೇಟಿ ನೀಡಿದ್ದು, ಸಂಬಂಧಿತ ದಾಖಲೆಗಳು ಹಾಗೂ ಸ್ಥಳೀಯ ಪೊಲೀಸರಿಂದ ಮಾಹಿತಿ ಕಲೆ ಹಾಕಿದೆ. ಈ ವೇಳೆ ತನಿಖಾ ಅಧಿಕಾರಿ ಜಿತೇಂದ್ರ ದಯಾಮ್ ಅವರು ಸ್ಥಳೀಯ ಎಸ್‌ಐ ಸಮರ್ಥ ಆರ್. ಗಾಣಿಗೇರ್ ಜತೆ ವಿಶೇಷ ಸಭೆ ನಡೆಸಿದರು.

ಮತ್ತೊಂದೆಡೆ, ಶನಿವಾರ (ಜುಲೈ 26) ದೂರು ನೀಡಿರುವ ವ್ಯಕ್ತಿಯನ್ನು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಗೆ ದೂರುದಾರ ತನ್ನ ನ್ಯಾಯಾಂಗ ವಕೀಲರ ಜೊತೆ ಆಗಮಿಸಿದ್ದು, ಮಲ್ಲಿಕಟ್ಟೆಯ ಸರ್ಕಾರಿ ಐಬಿಯಲ್ಲಿ ಎಸ್‌ಐಟಿಗೆ ಎರಡು ಕೊಠಡಿಗಳನ್ನು ಮೀಸಲಿಡಲಾಗಿದೆ.

ಧರ್ಮಸ್ಥಳ ಶವ ಹೂತು ಪ್ರಕರಣವು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಮೂರು ಜಿಲ್ಲೆಗಳ—ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ—ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಈ ತನಿಖಾ ತಂಡಕ್ಕೆ ನಿಯೋಜಿಸಲಾಗಿದೆ.

ಪ್ರಕರಣದ ಗಂಭೀರತೆ ಹಾಗೂ ಸಾರ್ವಜನಿಕ ಆಸಕ್ತಿಯನ್ನು ಪರಿಗಣಿಸಿದಂತೆ ಎಸ್‌ಐಟಿ ತಂಡ ತನಿಖೆಗೆ ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ಸಾಕ್ಷ್ಯ ಸಂಗ್ರಹ ಹಾಗೂ ಇನ್ನಷ್ಟು ಬಂಧನಗಳ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago