Latest

ನಂಜನಗೂಡು ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ವಿರುದ್ದ ದೂರು.!

ನಂಜನಗೂಡು : ನಂಜನಗೂಡು ತಾಲೂಕು ಕಚೇರಿಯಲ್ಲಿ ಹತ್ತಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ವಿರುದ್ದ ಸಾರ್ವಜನಿಕರು ದೂರು ನೀಡಿದ್ದಾರೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟು ಮಾಡುವುದು ಹಾಗೂ ಬೆದರಿಕೆ ಹಾಕುತ್ತಾರೆ ಎಂದು ದೂರು ಸಲ್ಲಿಸಿರುವ ಹಿನ್ನಲೆ ಮೈಸೂರು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಸಂಭಂಧ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮೈಸೂರು ಉಪವಿಭಾಗಾಧಿಕಾರಿಗಳ ಕಚೇರಿಗೆ ಪತ್ರ ರವಾನೆ ಆಗಿದ್ದು ಅಗತ್ಯ ಕ್ರಮ ಕೈಗೊಂಡು ದೂರುದಾರರಿಗೆ ಮಾಹಿತಿ ನಂತರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಆದರೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪತ್ರ ರವಾನೆ ಆಗಿ ಒಂದು ತಿಂಗಳು ಕಳೆದರೂ ಸಹ ಸಾರ್ವಜನಿಕರ ಜೊತೆ ಅಸಭ್ಯ ವರ್ತನೆ ತೋರಿರುವ ಕಿರಣ್ ಕುಮಾರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಇದೆ.ಜಿಲ್ಲಾಧಿಕಾರಿಗಳ ಪತ್ರಕ್ಕೆ ಮನ್ನಣೆ ನೀಡದಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.
ಈ ವಿಚಾರವಾಗಿ ನಂಜನಗೂಡಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕರನ್ನು ಮಾಧ್ಯಮದವರು ಪ್ರಶ್ನಿಸಿದಾಗ ಕೂಡಲೇ ಈ ವಿಚಾರವನ್ನು ಪರಿಶೀಲಿಸಿ ಕ್ರಮಕ್ಕೆ ಮುಂದಾಗುತ್ತೇವೆ ನಂಜನಗೂಡಿನ ತಾಲೂಕು ಕಚೇರಿಯಲ್ಲಿ ಸಾಕಷ್ಟು ಸಮಸ್ಯೆಗಳು ಕೇಳಿಬರುತ್ತದೆ ಜನತಾದರ್ಶನ ಕಾರ್ಯಕ್ರಮದಲ್ಲಿಯೂ ಕೂಡ ಸಾರ್ವಜನಿಕರಿಂದ ಅಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ವಿರುದ್ಧ ಸಾಕಷ್ಟು ದೂರುಗಳು ಕೇಳಿಬರುತ್ತವೆ ಇದನ್ನು ಸೂಕ್ಷ್ಮವಾಗಿ ಗಮನಿಸಿ ಹತ್ತಾರು ವರ್ಷಗಳಿಂದ ಜಾಂಡ ಹೂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮುಂದಾಗುತ್ತೇವೆ. ಜಿಲ್ಲಾಧಿಕಾರಿಗಳು ಉಪಯೋಗ ಅಧಿಕಾರಿಗೆ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದರು ಯಾಕಾಗಿ ಕ್ರಮ ಆಗಿಲ್ಲ ಎಂಬುದನ್ನು ಕೂಡ ನಾನು ತಿಳಿದುಕೊಳ್ಳುತ್ತೇನೆ ಸಾರ್ವಜನಿಕರ ಕೆಲಸ ಕಾರ್ಯ ಮಾಡಿದೆ ಕಾಲಹರಣ ಮಾಡುವ ಸಿಬ್ಬಂದಿಗಳ ವಿರುದ್ಧ ಈಗಾಗಲೇ ಮಾಹಿತಿ ಕಲೆ ಹಾಕಿದ್ದೇವೆ ಹತ್ತಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ಇರುವವರನ್ನು ಪಟ್ಟಿ ಮಾಡಿ ಅಂಥವರನ್ನ ತಾಲೂಕಿನಿಂದ ವರ್ಗಾವಣೆಗೊಳಿಸಲು ಮತ್ತು ಸಾರ್ವಜನಿಕರ ಜೊತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳದ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ನಾವು ಮುಂದಾಗುತ್ತೇವೆ ಎಂದು ಕೆಡಿಪಿ ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.

nazeer ahamad

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

19 minutes ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

21 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago