ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ಸೋಮವಾರ ಸಾಯಂಕಾಲ ಸುಮಾರು 5 ಗಂಟೆಗೆ ತಿಳಿದು ಬಂದಿದೆ.
ಬಂಗಾರಪೇಟೆ ಪಟ್ಟಣದ ಮಾದಯ್ಯ ರಸ್ತೆಯಲ್ಲಿರುವ ಸುರಭಿ ಹೋಟೆಲ್ ಪಕ್ಕದಲ್ಲಿರುವ ಸ್ಮಾರ್ಟ್ ಕಂಪ್ಯೂಟರ್ ಇನ್ಸಿಟ್ಯೂಟ್ ಮಹಡಿ ಮೇಲಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಅದೇ ಇನ್ಸಿಟ್ಯೂಟ್ ನ ಟೀಚರ್ ಆಗಿ ಕೆಲಸ ಮಾಡುತ್ತಿದ್ದು, ಬಂಗಾರಪೇಟೆ ತಾಲೂಕಿನ ಚಿಕ್ಕವಲಗಮಾದಿ ಗ್ರಾಮದ ನಿವಾಸಿ ಸುಷ್ಮ (23) ವರ್ಷ ಎಂದು ತಿಳಿದು ಬಂದಿದೆ. ಎಂದಿನಂತೆ ಇನ್ಸಿಟ್ಯೂಟ್ ಗೆ ಆಗಮಿಸಿದ ಸುಷ್ಟ ಮಹಡಿ ಮೇಲೆ ಇರುವ ಕೊಠಡಿ ಒಳಗಡೆಯಿಂದ ಚಿಲುಕ ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಮಧ್ಯಾಹ್ನ ಸಮಯದಲ್ಲಿ ಸುಷ್ಮಾ ರವರು ಮಹಡಿ ಮೇಲಿನ ಕೊಠಡಿಗೆ ಹೋದವರು ಬಹಳಷ್ಟು ಸಮಯವಾದರೂ ಇನ್ಸಿಟ್ಯೂಟ್ ಗೆ ಆಗಮಿಸದೆ ಇರುವುದನ್ನ ಗಮನಿಸಿದ ಸಹೋದ್ಯೋಗಿ ಮೇಲೆ ಹೋಗಿ ನೋಡಿದಾಗ ಬಾಗಿಲಿಗೆ ಚಿಲುಕ ಹಾಕಿಕೊಂಡಿರುವುದರಿಂದ ತೆರೆಯಲು ಸಾಧ್ಯವಾಗಲಿಲ್ಲ.
ಅನುಮಾನದ ಬಂದ ಮೇಲೆ ಕೂಡಲೇ ಪೊಲೀಸರಿಗೆ ತಳಿಸಿ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿ.ಐ. ದಯಾನಂದ್ ರವರು ಮತ್ತು ಪೊಲೀಸ್ ಸಿಬ್ಬಂದಿ ನಾಗರಾಜ್ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗಳು ಒಳಗಡೆ ಚಿಲುಕ ಹಾಕಿದ್ದ ಬಾಗಿಲನ್ನು ಬಲವಂತವಾಗಿ ತೆಗೆದು ನೋಡಿದಾಗ ಸುಷ್ಮ ಪ್ಯಾನ್ ಗೆ ನೇಣು ಹಾಕಿಕೊಂಡು ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣಗಳು ತಿಳಿದು ಬಂದಿಲ್ಲ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ವರದಿ: ರೋಶನ್ ಜಮೀರ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…