ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್ ಕಾರ್ಡ್ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.
ಆಧಾರ್ ಕಾರ್ಡ್ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ.
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…