ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್ ಕಾರ್ಡ್ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.
ಆಧಾರ್ ಕಾರ್ಡ್ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ.
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…