Categories: Latest

ನೀಟ್-2026 ಫಲಿತಾಂಶದಲ್ಲಿ ಅಂಕಗಳ ಗೊಂದಲ? NEET ಪರೀಕ್ಷೆಯಲ್ಲಿ ವೈಷ್ಣವಿದಾಸ ರಾಜ್ಯಕ್ಕೆ ಟಾಪ್, ಎನ್‌ಟಿಎ ವಿರುದ್ಧ ಪ್ರಶ್ನೆ

ಬೆಂಗಳೂರು: ನೀಟ್-2026 ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದರೂ, ಅಂಕಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂದು ರಾಜ್ಯದ ಪ್ರಮುಖ ಸಾಧಕರು ಎನ್‌ಟಿಎ (NTA) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಮೊದಲ ಸ್ಥಾನ ಪಡೆದಿರುವ ಬೆಂಗಳೂರಿನ ಜೆ.ಪಿ.ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ದಾಸ್ 720 ಅಂಕಗಳಿಗೆ 700 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 20ನೇ ರ‍್ಯಾಂಕ್ ಗಳಿಸಿದ್ದಾರೆ. ಆದರೆ, ಎನ್‌ಟಿಎ ಪ್ರಕಟಿಸಿದ್ದ ಕೀ ಉತ್ತರದ ಪ್ರಕಾರ ತಮಗೆ 710 ಅಂಕಗಳು ಬರಬೇಕಾಗಿತ್ತು ಎಂದು ಅವರು ಹೇಳಿದ್ದಾರೆ. 10 ಅಂಕಗಳ ವ್ಯತ್ಯಾಸದಿಂದ ತಮ್ಮ ಅಖಿಲ ಭಾರತ ರ‍್ಯಾಂಕ್ ಮೇಲೂ ಪರಿಣಾಮ ಬಿದ್ದಿದೆ ಎಂದು ವೈಷ್ಣವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ, ದಾವಣಗೆರೆಯ ವಿದ್ಯಾರ್ಥಿನಿ ಎಂ. ಸುಚಿತಾ 695 ಅಂಕಗಳೊಂದಿಗೆ ರಾಜ್ಯದಲ್ಲಿ ಎರಡನೇ ಹಾಗೂ ದೇಶದಲ್ಲಿ 48ನೇ ರ‍್ಯಾಂಕ್ ಪಡೆದಿದ್ದಾರೆ. ನಾಲ್ಕೂ ವಿಷಯಗಳ ಎಲ್ಲಾ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ದರೂ, ಕೀ ಉತ್ತರದ ಪ್ರಕಾರ ತಮಗೆ ಪೂರ್ಣ 720 ಅಂಕಗಳು ಸಿಗಬೇಕಾಗಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ 25 ಅಂಕಗಳು ಕಡಿಮೆಯಾಗಿರುವುದು ನಿರಾಸೆ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಇದರ ನಡುವೆಯೂ ನೀಟ್-2026ರಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಮುಖ ಸಾಧಕರ ಪಟ್ಟಿಯಲ್ಲಿ ರವಿಕಿರಣ್ ಕಿಣಿ (ಎಐಆರ್-62), ಬೆಂಗಳೂರಿನ ಅಲೆನ್ ಸಂಸ್ಥೆಯ ಬಿ.ಎಸ್. ದಿಗಂತ್ (ಎಐಆರ್-64), ಜೋಹಾನ್ ಜಾಬ್ (ಎಐಆರ್-69) ಹಾಗೂ ಜೆ. ಶ್ರೇಯಾಂಕ್ (ಎಐಆರ್-94) ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

1 day ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago