Categories: LatestNational

ಕಾಂಗ್ರೆಸ್ಗೆ ಅಹಿಂದ ಎಚ್ಚರಿಕೆ: ‘2028ಕ್ಕೆ ಹೊಸ ಪಕ್ಷ’ ಬೆದರಿಕೆ, ದಲಿತ ಸಿಎಂ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ ವರ್ಗವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ ಸಂಘಟನೆ, ಅಗತ್ಯವಿದ್ದರೆ 2028ರ ವೇಳೆಗೆ ಹೊಸ ರಾಜಕೀಯ ಪಕ್ಷವನ್ನು ರಚಿಸುವ ಎಚ್ಚರಿಕೆ ನೀಡಿದೆ.

ಅಹಿಂದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಿವಣ್ಣ ಅವರು ಮಾತನಾಡಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ‘‘ಕಾಂಗ್ರೆಸ್ನಿಂದ ಅಹಿಂದ ವರ್ಗಕ್ಕೆ ಅನ್ಯಾಯವಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ 2028ಕ್ಕೆ ರಾಷ್ಟ್ರೀಯ ಅಹಿಂದ ಪಕ್ಷವನ್ನು ರಚಿಸಿ ಚುನಾವಣೆಗೆ ಇಳಿಯುತ್ತೇವೆ’’ ಎಂದು ಎಚ್ಚರಿಕೆ ನೀಡಿದ್ದಾರೆ.

ಅವರು ಮುಂದುವರಿಸಿ, ಕೆಲ ನಿರ್ಧಾರಗಳು ಒಂದು ಕುಟುಂಬದ ಪರವಾಗಿ ನಡೆಯುತ್ತಿವೆ ಎಂದು ಆರೋಪಿಸಿ, ಅಲ್ಪಸಂಖ್ಯಾತರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದರು. ‘‘ನಾವು ಬೆಂಬಲ ನೀಡಿದರೂ ನಮಗೆ ಟಿಕೆಟ್ ನೀಡುವುದಿಲ್ಲ. ನಮ್ಮ ಮತ ಕೇಳಿ ಬಳಿಕ ನಮ್ಮನ್ನೇ ಕಡೆಗಣಿಸುತ್ತಾರೆ’’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ, ದಲಿತ ಮುಖ್ಯಮಂತ್ರಿ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ. ಜಿ. ಪರಮೇಶ್ವರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ನ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ವಿರುದ್ಧವೂ ಶಿವಣ್ಣ ವಾಗ್ದಾಳಿ ನಡೆಸಿದರು. ‘‘ರಾಜ್ಯದಲ್ಲಿ ನಿರುದ್ಯೋಗ ಮತ್ತು ಬೆಲೆ ಏರಿಕೆ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದರೆ ನಾಯಕರು ಜನರ ಸಮಸ್ಯೆಗಿಂತ ತಮ್ಮ ವೈಯಕ್ತಿಕ ಜೀವನದಲ್ಲೇ ನಿರತರಾಗಿದ್ದಾರೆ’’ ಎಂದು ಟೀಕಿಸಿದರು.

ಪ್ರಾತಿನಿಧ್ಯ ನೀಡದಿದ್ದರೆ ಕಠಿಣ ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ ಅವರು, ಅಹಿಂದ ಸಮುದಾಯದ ನಿರ್ಲಕ್ಷ್ಯ ಮುಂದುವರಿದರೆ ಕಾಂಗ್ರೆಸ್ ಎದುರು ತೀವ್ರ ಸವಾಲು ಎದುರಾಗಲಿದೆ ಎಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago